SHIVAMOGGA LIVE NEWS | 3 MAY 2024
SHIMOGA : ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಹಿಳೆಯರ ವ್ಯಾನಿಟಿ ಬ್ಯಾಗ್ನಿಂದ ಚಿನ್ನಾಬರಣ ಕಳ್ಳತನ ಪ್ರಕರಣ ಮತ್ತೆ ಶುರುವಾಗಿದೆ. ಶಿವಮೊಗ್ಗ ನಿಲ್ದಾಣದ ದಾವಣಗೆರೆ ಪ್ಲಾಟ್ಫಾರಂನಲ್ಲಿ ಬಸ್ ಹತ್ತುವಾಗ ವ್ಯಾನಿಟಿ ಬ್ಯಾಗ್ ಜಿಪ್ ತೆಗೆದು ಒಳಗೆ ಚಿನ್ನಾಭರಣ ಇದ್ದ ಬ್ಯಾಗ್ ಕಳವು ಮಾಡಲಾಗಿದೆ.
![]() |
ಕಳ್ಳತನ ಆಗಿದ್ದು ಹೇಗೆ?
ಶಿವಮೊಗ್ಗದ ಜೆಸಿ ನಗರದ ಶಿಲ್ಪಾ ಎಂಬುವವರು ತಮ್ಮ ಪತಿ ಮತ್ತು ಮಕ್ಕಳೊಂದಿಗೆ ದಾವಣಗೆರೆ ಪ್ಲಾಟ್ಫಾರಂನಿಂದ ಬಸ್ ಹತ್ತುವಾಗ ಘಟನೆ ಸಂಭವಿಸಿದೆ. ರಶ್ ಇದ್ದಿದ್ದರಿಂದ ಶಿಲ್ಪಾ ಅವರ ಪತಿ ಬಸ್ ಹತ್ತಿ ಸೀಟ್ ಹಿಡಿದಿದ್ದರು. ಮಕ್ಕಳೊಂದಿಗೆ ಬಸ್ ಹತ್ತಿದ ಶಿಲ್ಪಾ, ತಮ್ಮ ಸಹೋದರನಿಗೆ ಕರೆ ಮಾಡಲು ವ್ಯಾನಿಟಿ ಬ್ಯಾಗ್ನಲ್ಲಿದ್ದ ಮೊಬೈಲ್ ತೆಗೆಯಲು ಮುಂದಾದರು. ಆಗ ವ್ಯಾನಿಟಿ ಬ್ಯಾಗ್ ಜಿಪ್ ತೆರೆದಿತ್ತು.
ಬ್ಯಾಗಿನೊಳಗಿದ್ದ ಬ್ಯಾಗ್ ನಾಪತ್ತೆ
ವ್ಯಾನಿಟಿ ಬ್ಯಾಗಿನೊಳಗೆ ಇದ್ದ ಮತ್ತೊಂದು ಬ್ಯಾಗ್ ನಾಪತೆಯಾಗಿತ್ತು. ಅದರಲ್ಲಿ 1.18 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಇತ್ತು. ರಶ್ ಇದ್ದಾಗ ಬಸ್ ಹತ್ತುವಾಗ ವ್ಯಾನಿಟಿ ಬ್ಯಾಗ್ ಜಿಪ್ ತೆಗೆದು ಚಿನ್ನಾಭರಣವಿದ್ದ ಬ್ಯಾಗ್ ಕಳ್ಳತನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಸಾಂಪ್ರದಾಯಿಕ ಉಡುಪು ತೊಟ್ಟು ಶಿವಮೊಗ್ಗ ಸಿಟಿಯಲ್ಲಿ ಅಧಿಕಾರಿಗಳ ಮೆರವಣಿಗೆ, ಹೇಗಿತ್ತು? ಕಾರಣವೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200