ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 5 JUNE 2024
SHIMOGA : ಯಾರೂ ಇಲ್ಲದ ಸಂದರ್ಭ ಜ್ಯೋತಿಷಿಯ (Jyotishi) ಮನೆಯ ಹಿಂಬಾಗಿಲು ತೆಗೆದು ಒಳ ನುಗ್ಗಿರುವ ಕಳ್ಳರು 12.45 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳವು ಮಾಡಿದ್ದಾರೆ. ಶಿವಮೊಗ್ಗದ ಹೊಸಮನೆ ಬಡಾವಣೆಯ ಜ್ಯೋತಿಷಿ ಸಂತೋಷ್ ಭಟ್ ಅವರ ಮನೆಯಲ್ಲಿ ಘಟನೆ ಸಂಭವಿಸಿದೆ.
ಸಂತೋಷ್ ಭಟ್ ಅವರು ಕುಟುಂಬ ಸಹಿತ ದುಬೈಗೆ ತೆರಳಿದ್ದರು. ಈ ಸಂದರ್ಭ ಮನೆಯ ಹಿಂಬಾಗಿಲಿನ ಮೂಲಕ ಕಳ್ಳರು ಒಳ ನುಗ್ಗಿ 3.45 ಲಕ್ಷ ರೂ. ನಗದು, ಸುಮಾರು 9 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸಂತೋಷ್ ಭಟ್ ಅವರ ಪರಿಚಿತರು ಮನೆ ಬಳಿ ತೆರಳಿದ್ದಾಗ ಮುಂದಿನ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಅನುಮಾನ ಬಂದು ಹಿಂಬಾಗಿಲ ಬಳಿ ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ‘ಹೋಗಿಬರಲಿ ಟಾಟಾ..!ʼ ಮಧು, ನಟ ಶಿವರಾಜ್ ಕುಮಾರ್, ಗೀತಾಗೆ ಫೇಸ್ಬುಕ್ನಲ್ಲಿ ಕುಮಾರ್ ಟಕ್ಕರ್
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















