SHIVAMOGGA LIVE NEWS | 5 JUNE 2024
SHIMOGA : ಯಾರೂ ಇಲ್ಲದ ಸಂದರ್ಭ ಜ್ಯೋತಿಷಿಯ (Jyotishi) ಮನೆಯ ಹಿಂಬಾಗಿಲು ತೆಗೆದು ಒಳ ನುಗ್ಗಿರುವ ಕಳ್ಳರು 12.45 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳವು ಮಾಡಿದ್ದಾರೆ. ಶಿವಮೊಗ್ಗದ ಹೊಸಮನೆ ಬಡಾವಣೆಯ ಜ್ಯೋತಿಷಿ ಸಂತೋಷ್ ಭಟ್ ಅವರ ಮನೆಯಲ್ಲಿ ಘಟನೆ ಸಂಭವಿಸಿದೆ.
![]() |
ಸಂತೋಷ್ ಭಟ್ ಅವರು ಕುಟುಂಬ ಸಹಿತ ದುಬೈಗೆ ತೆರಳಿದ್ದರು. ಈ ಸಂದರ್ಭ ಮನೆಯ ಹಿಂಬಾಗಿಲಿನ ಮೂಲಕ ಕಳ್ಳರು ಒಳ ನುಗ್ಗಿ 3.45 ಲಕ್ಷ ರೂ. ನಗದು, ಸುಮಾರು 9 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸಂತೋಷ್ ಭಟ್ ಅವರ ಪರಿಚಿತರು ಮನೆ ಬಳಿ ತೆರಳಿದ್ದಾಗ ಮುಂದಿನ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಅನುಮಾನ ಬಂದು ಹಿಂಬಾಗಿಲ ಬಳಿ ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ‘ಹೋಗಿಬರಲಿ ಟಾಟಾ..!ʼ ಮಧು, ನಟ ಶಿವರಾಜ್ ಕುಮಾರ್, ಗೀತಾಗೆ ಫೇಸ್ಬುಕ್ನಲ್ಲಿ ಕುಮಾರ್ ಟಕ್ಕರ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200