ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಸೆಪ್ಟೆಂಬರ್ 2021
ಶಿವಮೊಗ್ಗ ಕಲ್ಲಗಂಗೂರು ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಭಾರಿ ಸ್ಪೋಟದಲ್ಲಿ ಮೃತಪಟ್ಟಿದ್ದ ಆರನೆ ವ್ಯಕ್ತಿಯ ಗುರುತು ಪತ್ತೆಯಾಗಿದೆ. ಪ್ರಕರಣ ಸಂಭವಿಸಿ ಏಳೂವರೆ ತಿಂಗಳ ಬಳಿಕ ವ್ಯಕ್ತಿಯ ಗುರುತು ಪತ್ತೆಯಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಯಾರಿದು ಆರನೇ ವ್ಯಕ್ತಿ?
ಕಲ್ಲಗಂಗೂರು ಕ್ವಾರಿಯಲ್ಲಿ ಸಂಭವಿಸಿದ ಸ್ಪೋಟದಲ್ಲಿ ಆರು ಮಂದಿ ಮೃತಪಟ್ಟಿದ್ದರು. ಐವರ ಗುರುತು ಪತ್ತೆಯಾಗಿ ಮೃತದೇಹಗಳನ್ನು ಹಸ್ತಾಂತರ ಮಾಡಲಾಗಿತ್ತು. ಆರನೆ ವ್ಯಕ್ತಿಯ ದೇಹ ಸಂಪೂರ್ಣ ಛಿದ್ರವಾಗಿತ್ತು. ಹಾಗಾಗಿ ಆತನ ಗುರುತು ಪತ್ತೆಯಾಗಿರಲಿಲ್ಲ. ಈಗ ಆತನ ಗುರುತು ಪತ್ತೆಯಾಗಿರುವುದಾಗಿ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮೃತನನ್ನು ಭದ್ರಾವತಿಯ ಕೆ.ಹೆಚ್.ನಗರದ ಆಟೋ ಚಾಲಕ ಶಶಿ (32) ಎಂದು ತಿಳಿದು ಬಂದಿದೆ.
ಗುರುತು ಪತ್ತೆಯಾಗಿದ್ದು ಹೇಗೆ?
ಛಿದ್ರವಾಗಿದ ದೇಹದ ಭಾಗಗಳನ್ನು ವಶಕ್ಕೆ ಪೆಡದಿದ್ದ ಪೊಲೀಸರು ಅವುಗಳನ್ನು ಡಿಎನ್ಎ ಪರೀಕ್ಷೆಗೆ ಒಳಪಡಿಸಿದ್ದರು. ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಲ್ಯಾಬ್’ಗೆ ಕಳುಹಿಸಲಾಗಿತ್ತು. ಸೆಪ್ಟೆಂಬರ್ 10ರಂದು ಡಿಎನ್ಎ ಪರೀಕ್ಷೆಯ ವರದಿ ಬಂದಿದೆ.
2021ರ ಜನವರಿ 21ರ ರಾತ್ರಿ 10.20ರ ಹೊತ್ತಿಗೆ ಕಲ್ಲಗಂಗೂರು ಗ್ರಾಮದ ಸರ್ವೇ ನಂಬರ್ 2ರಲ್ಲಿರುವ ಎಸ್.ಎಸ್.ಕ್ರಷರ್ ಬಳಿ ಭಾರಿ ಪ್ರಮಾಣದ ಸ್ಪೋಟಕ ಸ್ಪೋಟಗೊಂಡಿತ್ತು. ಘಟನೆಯಲ್ಲಿ ಆರು ಮಂದಿ ಮೃತರಾಗಿದ್ದರು. ಸ್ಪೋಟದ ತೀವ್ರತೆ ನೂರಾರು ಕಿ.ಮೀ ವರೆಗೆ ವ್ಯಾಪಿಸಿತ್ತು. ಶಿವಮೊಗ್ಗ ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಲ್ಲಿ ಭೂಕಂಪನದ ಅನುಭವವಾಗಿತ್ತು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494