SHIVAMOGGA LIVE NEWS | 2 DECEMBER 2022
ಶಿವಮೊಗ್ಗ : ಹಿಂದು ಸಂಘಟನೆ ಮುಖಂಡರೊಬ್ಬರಿಗೆ ವ್ಯಕ್ತಿಯೊಬ್ಬ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪ ಕೇಳಿ ಬಂದಿದೆ. ಹಣ ಪಡೆಯಲು ಬಂದ ವ್ಯಕ್ತಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. (kattappa arrested)
(kattappa arrested)
ವಿಶ್ವ ಹಿಂದು ಪರಿಷತ್ ಸಂಘಟನೆಯ ಮುಖಂಡ ಜಿತೇಂದ್ರ ಗೌಡ ಅವರಿಗೆ ಬೆದರಿಕೆ ಕೆರೆ ಮಾಡಿ ಹಣಕ್ಕೆ ಬೆಡಿಕೆ ಇಡಲಾಗಿತ್ತು. ಹಣ ಪಡೆಯಲು ಬಂದಿದ್ದ ಅಲ್ತಾಫ್ ಹುಸೇನ್ ಅಲಿಯಾಸ್ ಕಟ್ಟಪ್ಪ ಎಂಬಾತನನ್ನು ಬಂಧಿಸಲಾಗಿದೆ.
ಗೋಪಾಲಗೌಡ ಬಡಾವಣೆಯಲ್ಲಿ ಬಳೆ ಅಂಗಡಿ ನಡೆಸುತ್ತಿರುವ ಜಿತೇಂದ್ರ ಗೌಡ ಅವರು ಹಿಂದು ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈಚೆಗೆ ಜಿತೇಂದ್ರ ಗೌಡ ಅವರಿಗೆ ವಾಟ್ಸಪ್ ಕರೆ ಮಾಡಿದ ವ್ಯಕ್ತಿ, ಹಣಕ್ಕೆ ಬೇಡಿಕೆ ಇಟ್ಟಿದ್ದ. ಈ ಸಂಬಂಧ ಜಿತೇಂದ್ರ ಗೌಡ ಅವರು ಪೊಲೀಸರಿಗೆ ದೂರು ನೀಡಿದ್ದರು.
10 ಸಾವಿರ ರೂ. ಹಣ ಪಡೆಯಲು ಬಂದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆತನನ್ನು ಅಲ್ತಾಫ್ ಹುಸೇನ್ ಅಲಿಯಾಸ್ ಕಟ್ಟಪ್ಪ ಎಂದು ಗುರುತಿಸಲಾಗಿದೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ALSO READ – ಶಿವಮೊಗ್ಗದ ಖಾಸಗಿ ಆಸ್ಪತ್ರೆ ವೈದ್ಯ ನೇಣು ಬಿಗಿದು ಆತ್ಮಹತ್ಯೆ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200