SHIVAMOGGA LIVE NEWS | 18 MAY 2024
AGUMBE GHAT : ಘಾಟಿಯಲ್ಲಿ ಕೆಎಸ್ಆರ್ಟಿಸಿ ಬಸ್ ಅಡ್ಡಗಟ್ಟಿ ಡ್ರೈವರ್ ಮತ್ತು ಕಂಡಕ್ಟರ್ ಮೇಲೆ ಹಲ್ಲೆ ನಡೆಸಲಾಗಿದೆ. ಈ ಸಂಬಂಧ ಉಡುಪಿ ಜಿಲ್ಲೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದಿಂದ ಉಡುಪಿಗೆ ಆಗುಂಬೆ ಮಾರ್ಗವಾಗಿ ಬಸ್ಸು ತೆರಳುತ್ತಿತ್ತು. ಘಾಟಿಯ ಆರನೇ ತಿರುವು ಮತ್ತು ಏಳನೆ ತಿರುವಿನಲ್ಲಿ ಹಿಂಬದಿಯಿಂದ ಬಂದ ಕಾರೊಂದು ನಿರಂತರ ಹಾರನ್ ಮಾಡಿದೆ. ಸೋಮೇಶ್ವರ ಸಮೀಪ ಬಸ್ಸನ್ನು ಹಿಂದಿಕ್ಕಿದ ಕೇರಳ ನೋಂದಣಿಯ ಕಾರಿನಿಂದ ಕೆಳಗಿಳಿದ ಉಡುಪಿಯ ಜುನೈದ್ ಮೊಹಮ್ಮದ್, ಕೇರಳದ ಕಾಸರಗೋಡಿನ ಅಬೂಬಕರ್ ಅರ್ಶೋಕ್, ರಿಜಾಖಾನ್ ಶೀಲ್ ಎಂಬುವವರು ಬಸ್ ಚಾಲಕನನ್ನು ಬಸ್ಸಿನಿಂದ ಕೆಳಗೆಳೆದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ – ಅಕ್ರಮ ಬಡ್ಡಿ ದಂಧೆ, ಶಿವಮೊಗ್ಗದಲ್ಲಿ ಮನೆ ಮೇಲೆ ಪೊಲೀಸರ ದಾಳಿ, ದಾಖಲೆಗಳು ವಶಕ್ಕೆ
ಕೆಎಸ್ಆರ್ಟಿಸಿ ಚಾಲಕ ಶಿವಾನಂದ ಶಿವಲಿಂಗ ಖೋತ್ ಮೇಲೆ ಹಲ್ಲೆ ನಡೆಸಲಾಗಿದೆ. ಉಡುಪಿ ಜಿಲ್ಲೆ ಹೆಬ್ರಿ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200