SHIVAMOGGA LIVE NEWS | Politics News | 7 ಏಪ್ರಿಲ್ 2022
ಆರೋಪಿಯೊಬ್ಬ ಬಿಜೆಪಿ ಕಾರ್ಯಕರ್ತನಾಗಿದ್ದರೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಚೌ ಚೌ ಬಾತ್, ಟೀ ತರಿಸಿ, ಕೂರಿಸಿ ಮಾತನಾಡಿಸುತ್ತಾರೆ. ಆದರೆ ದೂರುದಾರನನ್ನು ನಿಲ್ಲಿಸಿ ಮಾತನಾಡಿಸುತ್ತಾರೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು, ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಕಾರ್ಯಕರ್ತರು ಎಂದರೆ ಭಾರಿ ಗೌರವ. ಭಾನುಪ್ರಕಾಶ್ ಅವರು ಇಂಚಾರ್ಜ್ ಎಂದು ಗೊತ್ತಿರಲಿಲ್ಲ. ಆರೋಪಿ ಬಿಜೆಪಿ ಪಕ್ಷಕ್ಕೆ ಸೇರಿದವನಾದರೆ ಟೀ ತರಿಸಿ ಕೂರಿಸಿ ಮಾತನಾಡಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜಿ ಮಾಡಿಸಲು ಮುಂದಾಗುತ್ತಾರೆ
ಬಿಜೆಪಿಯವರು ತಪ್ಪು ಮಾಡಿದಲ್ಲೆಲ್ಲ ಪೊಲೀಸರು ರಾಜಿ ಮಾಡಿಸುತ್ತಿದ್ದಾರೆ. ಕಾಂಗ್ರೆಸ್’ನವರು ತಪ್ಪು ಮಾಡಿದರೆ ಕೂಡಲೆ ಪ್ರಕರಣ ದಾಖಲು ಮಾಡಿ, ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸುತ್ತಾರೆ. ಕಲ್ಲು ಕಂಬಗಳನ್ನು ಕದ್ದುಕೊಂಡು ಹೋಗಿರುವ ಕುರಿತು ದೂರು ಕೊಟ್ಟರೆ ಪ್ರಕರಣ ದಾಖಲು ಮಾಡಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿ ಅವರಿಗೂ ತಿಳಿಸಲಾಗಿದೆ ಎಂದರು.
ಪೊಲೀಸ್ ಠಾಣೆಯಿಂದ ಕರೆ ಮಾಡಿ, ರಾಜಿ ಮಾಡಿಕೊಳ್ಳುವಂತೆ ದೂರುದಾರರಿಗೆ ತಿಳಿಸುತ್ತಿದ್ದಾರೆ. ಘಟನೆ ಖಂಡಿಸಿ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಧರಣಿ ಸತ್ಯಾಗ್ರಹ ಮಾಡುತ್ತೇನೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಎಚ್ಚರಿಸಿದರು.
Politics News
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200