ಹೊಸನಗರದಲ್ಲಿ ಕಂದಕಕ್ಕೆ ಉರುಳಿದ KSRTC ಬಸ್‌, ಮರದಿಂದಾಗಿ ತಪ್ಪಿತು ದೊಡ್ಡ ಅನಾಹುತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 JULY 2024

HOSANAGARA : ಎದುರಿನಿಂದ ಬಂದ ವಾಹನಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ KSRTC ಬಸ್‌ ಕಂದಕಕ್ಕೆ ಉರುಳಿದೆ. ಅದೃಷ್ಟವಶಾತ್‌ ದೊಡ್ಡ ಅನಾಹುತ ತಪ್ಪಿದೆ. ಹೊಸನಗರ ತಾಲೂಕು ಮತ್ತಿಮನೆ ಸಮೀಪದ ಬೊಪ್ಪನಮನೆ ಗ್ರಾಮದ ಬಳಿ ತಿರುವಿನಲ್ಲಿ ಘಟನೆ ಸಂಭವಿಸಿದೆ.

ಹೇಗಾಯ್ತು ಅಪಘಾತ?

ಬೆಂಗಳೂರಿನಿಂದ ಭಟ್ಕಳಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ತಿರುವಿನಲ್ಲಿ ಎದುರಿನಿಂದ ಬಂದ ವಾಹನಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಕಂದಕಕ್ಕೆ ಉರುಳಿದೆ. ಅದೃಷ್ಟವಶಾತ್‌ ಮರ ಇದ್ದಿದ್ದರಿಂದ ಬಸ್‌ ಪೂರ್ಣ ಕಂದಕಕ್ಕೆ ಬಿದ್ದಿಲ್ಲ. ಬಸ್ಸಿನಲ್ಲಿ ಸುಮಾರು 60 ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಸುಮಾರು 15 ಪ್ರಯಾಣಿಕರು ಗಾಯಗೊಂಡಿದ್ದಾರೆ.

KSRTC-Bus-fell-down-at-Hosanagara

ಎದುರಿನ ವಾಹನವು ಜಖಂ

ಭಟ್ಕಳ ಕಡೆಯಿಂದ ಹೊಸನಗರ ಕಡೆಗೆ ತೆರಳುತ್ತಿದ್ದ ಎಟಿಎಂಗೆ ಹಣ ಹಾಕುವ ವಾಹನಕ್ಕೆ ಬಸ್‌ ಡಿಕ್ಕಿಯಾಗಿದೆ. ಎಟಿಎಂ ವಾಹನದ ಮುಂಭಾಗ ಜಖಂ ಆಗಿದೆ. ಬಸ್‌ ಪಲ್ಟಿಯ ವಿಚಾರ ತಿಳಿಯುತ್ತಿದ್ದಂತೆ ಸುತ್ತಮುತ್ತಲ ಗ್ರಾಮದ ಜನರು ಮತ್ತು ವಾಹನ ಸವಾರರು ಸ್ಥಳಕ್ಕೆ ದೌಡಾಯಿಸಿ ಪ್ರಯಾಣಿಕರ ರಕ್ಷಣೆ ಮಾಡಿದರು. ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಇದನ್ನೂ ಓದಿ – ಶಿವಮೊಗ್ಗ ರೈಲ್ವೆ ನಿಲ್ದಾಣದಿಂದ ಹೊರ ಬಂದ ಯುವಕನಿಗೆ ಕಾದಿತ್ತು ಶಾಕ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment