ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 1 JULY 2024
HOSANAGARA : ಎದುರಿನಿಂದ ಬಂದ ವಾಹನಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ KSRTC ಬಸ್ ಕಂದಕಕ್ಕೆ ಉರುಳಿದೆ. ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದೆ. ಹೊಸನಗರ ತಾಲೂಕು ಮತ್ತಿಮನೆ ಸಮೀಪದ ಬೊಪ್ಪನಮನೆ ಗ್ರಾಮದ ಬಳಿ ತಿರುವಿನಲ್ಲಿ ಘಟನೆ ಸಂಭವಿಸಿದೆ.
ಹೇಗಾಯ್ತು ಅಪಘಾತ?
ಬೆಂಗಳೂರಿನಿಂದ ಭಟ್ಕಳಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ತಿರುವಿನಲ್ಲಿ ಎದುರಿನಿಂದ ಬಂದ ವಾಹನಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಕಂದಕಕ್ಕೆ ಉರುಳಿದೆ. ಅದೃಷ್ಟವಶಾತ್ ಮರ ಇದ್ದಿದ್ದರಿಂದ ಬಸ್ ಪೂರ್ಣ ಕಂದಕಕ್ಕೆ ಬಿದ್ದಿಲ್ಲ. ಬಸ್ಸಿನಲ್ಲಿ ಸುಮಾರು 60 ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಸುಮಾರು 15 ಪ್ರಯಾಣಿಕರು ಗಾಯಗೊಂಡಿದ್ದಾರೆ.

ಎದುರಿನ ವಾಹನವು ಜಖಂ
ಭಟ್ಕಳ ಕಡೆಯಿಂದ ಹೊಸನಗರ ಕಡೆಗೆ ತೆರಳುತ್ತಿದ್ದ ಎಟಿಎಂಗೆ ಹಣ ಹಾಕುವ ವಾಹನಕ್ಕೆ ಬಸ್ ಡಿಕ್ಕಿಯಾಗಿದೆ. ಎಟಿಎಂ ವಾಹನದ ಮುಂಭಾಗ ಜಖಂ ಆಗಿದೆ. ಬಸ್ ಪಲ್ಟಿಯ ವಿಚಾರ ತಿಳಿಯುತ್ತಿದ್ದಂತೆ ಸುತ್ತಮುತ್ತಲ ಗ್ರಾಮದ ಜನರು ಮತ್ತು ವಾಹನ ಸವಾರರು ಸ್ಥಳಕ್ಕೆ ದೌಡಾಯಿಸಿ ಪ್ರಯಾಣಿಕರ ರಕ್ಷಣೆ ಮಾಡಿದರು. ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಇದನ್ನೂ ಓದಿ – ಶಿವಮೊಗ್ಗ ರೈಲ್ವೆ ನಿಲ್ದಾಣದಿಂದ ಹೊರ ಬಂದ ಯುವಕನಿಗೆ ಕಾದಿತ್ತು ಶಾಕ್
LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು





