ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 7 ನವೆಂಬರ್ 2019
ಶಿವಮೊಗ್ಗ ತಾಲೂಕಿನ ಹಿಟ್ಟೂರು ಗ್ರಾಮದ ಬಳಿ ರಾತ್ರಿ ವಾಹನ ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದ ಇಬ್ಬರನ್ನು ಕುಂಸಿ ಠಾಣೆ ಪೊಲೀಸರು ಬಂಧಿಸಿದ್ದು, ಮೂವರು ಪರಾರಿಯಾಗಿದ್ದಾರೆ.
ಬಂಧಿತರಿಂದ ಚಾಕು, ಖಾರದ ಪುಡಿ ಪ್ಯಾಕೇಟ್, ಒಂದು ಬೈಕಿನ ಬಂಪರ್ ಕೊಳವೆ ಹಾಗೂ ಕಬ್ಬಿಣದ ರಾಡ್ ವಶ ಪಡಿಸಿಕೊಳ್ಳಲಾಗಿದೆ.
ಸೋಮಿನಕೊಪ್ಪದ ಸೈಯದ್ ಮೆಹಬೂಬ್ ( 22) ಮತ್ತು ಅಯನೂರು ಕೋಟೆ ಗ್ರಾಮದ ವೈ.ಕುಮಾರ (30) ಬಂಧಿತರು. ಸೋಮಿನಕೊಪ್ಪದ ಅಮೀರ್ (20), ಸುಲೇಮಾನ್ ಅಲಿಯಾಸ್ ಡಾಕು, ಮುಬಾರಕ್ ಅಲಿಯಾಸ್ ಸೈಯದ್ ಮುಬಾರಕ್ ಅಲಿಯಾಸ್ ಕಾಲು ಎಂಬುವರು ಪರಾರಿಯಾಗಿದ್ದಾರೆ.
ಹಿತ್ತೂರು ರಸ್ತೆಯಲ್ಲಿ ಕೈಯಲ್ಲಿ ಕಾರದಪುಡಿ ರಾಡು ಮತ್ತಿತರ ವಸ್ತುಗಳನ್ನು ಹಿಡಿದು ವಾಹನಗಳನ್ನು ತಡೆದು ದರೋಡೆ ಮಾಡುತ್ತಿರುವ ಬಗ್ಗೆ ದಾರಿಹೋಕರು ನೀಡಿದ ಮಾಹಿತಿ ಮೇರೆಗೆ ದಾಳಿ ನಡೆಸಿದಾಗ ಇಬ್ಬರು ಸಿಕ್ಕಿ ಬಿದ್ದಿದ್ದಾರೆ. ದಾಳಿ ಮಾಡಿದವರು ಪೊಲೀಸರು ಎಂಬುದನ್ನು ಖಚಿತವಾಗುತ್ತಿದ್ದಂತೆ ಉಳಿದ ಮೂವರು ಸ್ಥಳದಿಂದ ಪರಾರಿಯಾಗಿದ್ದಾರೆ. ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






