ರೈಲ್ವೆ ಸೇತುವೆ ಕೆಳಗೆ ಪೊಲೀಸರಿಂದ ದಾಳಿ, 13 ಮಂದಿ, ಎಂಟು ಬೈಕುಗಳು, ಮೊಬೈಲ್ ಫೋನ್’ಗಳು ವಶಕ್ಕೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | AYANUR NEWS | 12 ನವೆಂಬರ್ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಅಂದರ್ ಬಾಹರ್ ಆಟವಾಡುತ್ತಿದ್ದ 13 ಮಂದಿಯನ್ನು ಬಂಧಿಸಿದ್ದಾರೆ. ಇವರಿಂದ ವಾಹನಗಳು, ಮೊಬೈಲ್ ಫೋನ್’ಗಳು ಸೇರಿದಂತೆ ಏಳು ಲಕ್ಷ ರೂ. ಮೊತ್ತದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಹೇಗಾಯ್ತು ದಾಳಿ?

ADVT JULY NANJAPPA HOSPITAL HOME LAB TESTING

ರಾಗಿಹೊಸಳ್ಳಿ ಗ್ರಾಮದ ರೈಲ್ವೆ ಸೇತುವೆ ಕೆಳಗೆ ಅಂದರ್ ಬಾಹರ್ ಆಟ ಆಡುತ್ತಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗಿತ್ತು. ಪಿಎಸ್ಐ ಭಾರತಿ ಬಾಯಿ ನೇತೃತ್ವದಲ್ಲಿ ಸಿಬ್ಬಂದಿಗಳಾದ ಬಸಂತಪ್ಪ, ನಾಗರಾಜ್, ಪರಮೇಶ್, ಪ್ರವೀಣ್, ಮಂಜುನಾಥ ಕಣವಿಹಳ್ಳಿ, ಶಶಿಕುಮಾರ್, ಶಿವಕುಮಾರ್ ಅವರು ದಾಳಿ ನಡೆಸಿದರು.

ರೈಲ್ವೆ ಸೇತುವೆ ಕೆಳಗೆ 13 ಮಂದಿ ಅಂದರ್ ಬಾಹರ್ ಆಟವಾಡುತ್ತಿದ್ದರು. ಇದನ್ನು ಗಮನಿಸಿದ ಪೊಲೀಸರು ದಾಳಿ ನಡೆಸಿದ್ದಾರೆ. ಆಟವಾಡುತ್ತಿದ್ದ ಅಷ್ಟೂ ಮಂದಿಯನ್ನ ಬಂಧಿಸಲಾಗಿದೆ. ಬಂಧಿತರಿಂದ ಎಂಟು ಬೈಕ್, ಒಂದು ಪ್ಯಾಸೆಂಜರ್ ಆಟೋ, ಹನ್ನೆರಡು ಮೊಬೈಲ್ ಫೋನ್’ಗಳನ್ನು ವಶಕ್ಕೆ ಪಡೆಯಲಾಗಿದೆ.

ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment