ಶಿವಮೊಗ್ಗ ಲೈವ್.ಕಾಂ | AYANUR NEWS | 12 ನವೆಂಬರ್ 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಅಂದರ್ ಬಾಹರ್ ಆಟವಾಡುತ್ತಿದ್ದ 13 ಮಂದಿಯನ್ನು ಬಂಧಿಸಿದ್ದಾರೆ. ಇವರಿಂದ ವಾಹನಗಳು, ಮೊಬೈಲ್ ಫೋನ್’ಗಳು ಸೇರಿದಂತೆ ಏಳು ಲಕ್ಷ ರೂ. ಮೊತ್ತದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಹೇಗಾಯ್ತು ದಾಳಿ?

ರಾಗಿಹೊಸಳ್ಳಿ ಗ್ರಾಮದ ರೈಲ್ವೆ ಸೇತುವೆ ಕೆಳಗೆ ಅಂದರ್ ಬಾಹರ್ ಆಟ ಆಡುತ್ತಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗಿತ್ತು. ಪಿಎಸ್ಐ ಭಾರತಿ ಬಾಯಿ ನೇತೃತ್ವದಲ್ಲಿ ಸಿಬ್ಬಂದಿಗಳಾದ ಬಸಂತಪ್ಪ, ನಾಗರಾಜ್, ಪರಮೇಶ್, ಪ್ರವೀಣ್, ಮಂಜುನಾಥ ಕಣವಿಹಳ್ಳಿ, ಶಶಿಕುಮಾರ್, ಶಿವಕುಮಾರ್ ಅವರು ದಾಳಿ ನಡೆಸಿದರು.
ರೈಲ್ವೆ ಸೇತುವೆ ಕೆಳಗೆ 13 ಮಂದಿ ಅಂದರ್ ಬಾಹರ್ ಆಟವಾಡುತ್ತಿದ್ದರು. ಇದನ್ನು ಗಮನಿಸಿದ ಪೊಲೀಸರು ದಾಳಿ ನಡೆಸಿದ್ದಾರೆ. ಆಟವಾಡುತ್ತಿದ್ದ ಅಷ್ಟೂ ಮಂದಿಯನ್ನ ಬಂಧಿಸಲಾಗಿದೆ. ಬಂಧಿತರಿಂದ ಎಂಟು ಬೈಕ್, ಒಂದು ಪ್ಯಾಸೆಂಜರ್ ಆಟೋ, ಹನ್ನೆರಡು ಮೊಬೈಲ್ ಫೋನ್’ಗಳನ್ನು ವಶಕ್ಕೆ ಪಡೆಯಲಾಗಿದೆ.
ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
LATEST NEWS
- ಭದ್ರಾವತಿಯಲ್ಲಿ ಸಬ್ ಇನ್ಸ್ಪೆಕ್ಟರ್ಗಳ ಕಾಲಿನ ಮೂಳೆ, ಕೈ ಬೆರಳು ಕಟ್, ಆರೋಪಿ ಕಾಲಿಗೆ ಗುಂಡೇಟು

- ಶಿವಮೊಗ್ಗ ಜಿಲ್ಲೆಯಲ್ಲಿ ಮೈ ಸುಡುವ ಬಿಸಿಲಿನ ಜೊತೆಗೆ ಮೈ ನಡುಗಿಸುವ ಚಳಿ, ಇವತ್ತಿನ ಹವಾಮಾನ ವರದಿ

- ಶಿವಮೊಗ್ಗ ತಾಲೂಕಿನ ಹಲವೆಡೆ ಫೆಬ್ರವರಿ 8, 9 ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ನಂಜಪ್ಪ ಆಸ್ಪತ್ರೆಯಲ್ಲಿ ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್, ಏನಿದು? ಹೇಗೆ ನಡೆಯಿತು ಪ್ರಕ್ರಿಯೆ?

- ಶಿವಮೊಗ್ಗ ಬೈಪಾಸ್ನಲ್ಲಿ ಧಗಧಗ ಉರಿದ ಮಳಿಗೆ, ವಸ್ತುಗಳು ಸ್ಪೋಟ, ಏನೇನಾಯ್ತು?

About The Editor
ನಿತಿನ್ ಆರ್.ಕೈದೊಟ್ಲು






