SHIVAMOGGA LIVE NEWS | 16 MARCH 2024
ಸಿದ್ಲೀಪುರದಲ್ಲಿ ಹುಲ್ಲಿನ ಬಣವೆಗೆ ಬೆಂಕಿ
HOLEHONNURU : ಹುಲ್ಲಿನ ಬಣವೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ 280 ಪೆಂಡಿ ಹುಲ್ಲು ಸುಟ್ಟು ಹೋಗಿದೆ. ಸಿದ್ಲೀಪುರ ಗ್ರಾಮದ ಜಯಮ್ಮ ಹನುಮಂತಪ್ಪ ಎಂಬುವವರಿಗೆ ಸೇರಿದ ಹುಲ್ಲಿನ ಬಣವೆಗೆ ಬೆಂಕಿ ಹೊತ್ತುಕೊಂಡಿತ್ತು. ಕೂಡಲೆ ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದರು. ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು. 70 ಸಾವಿರ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಕಮಲಾಪುರದಲ್ಲಿ ಹುಲ್ಲು, ಭತ್ತ ಭಸ್ಮ
SORABA : ಬೆಂಕಿ ತಗುಲಿ ಭತ್ತದ ಹುಲ್ಲಿನ ಪೆಂಡಿಗಳು, ಭತ್ತ ಸಂಪೂರ್ಣ ನಾಶವಾಗಿದೆ. ಚಂದ್ರಗುತ್ತಿ ಸಮೀಪದ ಕಮಲಾಪುರ ಗ್ರಾಮದ ನಾಗರಾಜ ಮತ್ತು ಶೇಖರ ಎಂಬುವವರ ಜಮೀನಿನ ಪಕ್ಕದಲ್ಲಿ ತರಗೆಲೆಗಳಿಗೆ ಯಾರೋ ಹಚ್ಚಿದ ಬೆಂಕಿ ಇವರ ಜಮೀನನ್ನು ಆವರಿಸಿದೆ. ನಾಗರಾಜ ಅವರಿಗೆ ಸೇರಿದ ಹುಲ್ಲಿನ 2 ಸಾವಿರ ಪೆಂಡಿ, 10 ಕ್ವಿಂಟಾಲ್ ಭತ್ತ ಹಾಗೂ ಶೇಖರ ಅವರಿಗೆ ಸೇರಿದ ಹುಲ್ಲಿನ ಒಂದು ಸಾವಿರ ಪೆಂಡಿ ಭಸ್ಮವಾಗಿವೆ.
ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ
TALAGUPPA : ಆಲಳ್ಳಿ ಸಮೀಪದ ಕಾಡಿನಲ್ಲಿ ಶುಕ್ರವಾರ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಕುಮಟಾ ಮೂಲದ ಉಪೇಂದ್ರ (45) ಮೃತರು. ಇವರ ಕುಟುಂಬದವರು ಸಿದ್ದಾಪುರದಲ್ಲಿ ನೆಲೆಸಿದ್ದಾರೆ ಎನ್ನಲಾಗಿದೆ. ಸಾಗರ ಗ್ರಾಮಾಂತರ ಠಾಣೆಯುಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಗಂಡನೊಂದಿಗೆ ಜಗಳದ ವೇಳೆ ಹೆಂಡತಿಗೆ ಗಂಭೀರ ಗಾಯ, ಸಾವು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200