NEWS HIGHLIGHTS
SHIMOGA, 5 SEPTEMBER 2024 : KSRTC ಬಸ್ಸಿನಲ್ಲಿ ಪ್ರಯಾಣಿಕರೊಬ್ಬರಿಗೆ ಸೇರಿದ ಬ್ಯಾಗ್ ಕಳ್ಳತನ ಮಾಡಲಾಗಿದೆ. ಅದರಲ್ಲಿ ಲ್ಯಾಪ್ ಟಾಪ್ ಸೇರಿ ವಿವಿಧ ವಸ್ತುಗಳಿದ್ದವು ಎಂದು ದೂರಿನಲ್ಲಿ ತಿಳಿಸಲಾಗಿದೆ.
➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.ತೀರ್ಥಹಳ್ಳಿ ತಾಲೂಕು ಕಮ್ಮರಡಿ ಮೂಲದ ಇಂಜಿನಿಯರ್ ಸುಹೈಬತ್ ಉಲ್ ಅಸ್ಲಾಮಿಯಾ ಎಂಬುವರು ಬೆಂಗಳೂರಿನಿಂದ ತಮ್ಮೂರಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.
ಎಚ್ಚರವಾದಾಗ ಬ್ಯಾಗ್ ನಾಪತ್ತೆ
ಸುಹೈಬತ್ ಉಲ್ ಅಸ್ಲಾಮಿಯಾ ಅವರು ಬೆಂಗಳೂರಿನಿಂದ ಶೃಂಗೇರಿಗೆ ತೆರಳುವ ಬಸ್ ಹತ್ತಿದ್ದರು. ಆ ಬಸ್ಸು ಬೆಳಗ್ಗೆ 5 ಗಂಟೆಗೆ ಶಿವಮೊಗ್ಗಕ್ಕೆ ಬಂದು ಶೃಂಗೇರಿ ಕಡೆಗೆ ತೆರಳುತ್ತಿತ್ತು. ತೀರ್ಥಹಳ್ಳಿ ತಾಲೂಕು ಹೆಗ್ಗೋಡು ಬಳಿ ಬಸ್ ತೆರಳುತ್ತಿದ್ದ ವೇಳೆ ಸುಹೈಬತ್ ಅವರಿಗೆ ಮನೆಯವರು ಕರೆ ಮಾಡಿದ್ದರು. ಎಚ್ಚರವಾದಾಗ ಪಕ್ಕದಲ್ಲಿ ಇಟ್ಟಿದ್ದ ಬ್ಯಾಗ್ ನಾಪತ್ತೆಯಾಗಿತ್ತು.
ಬ್ಯಾಗ್ನಲ್ಲಿ ಬಟ್ಟೆ, ಚಪ್ಪಲಿ, ಐ ಫೋನ್ ಚಾರ್ಜರ್, ಲ್ಯಾಪ್ಟಾಪ್ ಇತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಸ್ಸು ಶಿವಮೊಗ್ಗ ನಿಲ್ದಾಣಕ್ಕೆ ಹೋಗಿದ್ದಾಗ ಕಳ್ಳರು ತಮ್ಮ ಬ್ಯಾಗ್ ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಎಂದು ಆರೋಪಿಸಲಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗ ಸ್ಮಾರ್ಟ್ ಸಿಟಿ, ಎಂಎಲ್ಎ ಮೀಟಿಂಗ್, ನಾಲ್ಕು ಪ್ರಮುಖ ಪಾಯಿಂಟ್ ಚರ್ಚೆ