ಫೋನ್‌ ಬಂತು ಅಂತಾ ಎಚ್ಚರವಾಗಿ ಪಕ್ಕದ ಸೀಟ್‌ ಕಡೆ ಕಣ್ಣು ಹಾಯಿಸಿದ ಇಂಜಿನಿಯರ್‌ಗೆ ಕಾದಿತ್ತು ಆಘಾತ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
SHIMOGA, 5 SEPTEMBER 2024 : KSRTC ಬಸ್ಸಿನಲ್ಲಿ ಪ್ರಯಾಣಿಕರೊಬ್ಬರಿಗೆ ಸೇರಿದ ಬ್ಯಾಗ್‌ ಕಳ್ಳತನ ಮಾಡಲಾಗಿದೆ. ಅದರಲ್ಲಿ ಲ್ಯಾಪ್‌ ಟಾಪ್‌ ಸೇರಿ ವಿವಿಧ ವಸ್ತುಗಳಿದ್ದವು ಎಂದು ದೂರಿನಲ್ಲಿ ತಿಳಿಸಲಾಗಿದೆ.
➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ತೀರ್ಥಹಳ್ಳಿ ತಾಲೂಕು ಕಮ್ಮರಡಿ ಮೂಲದ ಇಂಜಿನಿಯರ್‌ ಸುಹೈಬತ್‌ ಉಲ್‌ ಅಸ್ಲಾಮಿಯಾ ಎಂಬುವರು ಬೆಂಗಳೂರಿನಿಂದ ತಮ್ಮೂರಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.

ಎಚ್ಚರವಾದಾಗ ಬ್ಯಾಗ್‌ ನಾಪತ್ತೆ

ಸುಹೈಬತ್‌ ಉಲ್‌ ಅಸ್ಲಾಮಿಯಾ ಅವರು ಬೆಂಗಳೂರಿನಿಂದ ಶೃಂಗೇರಿಗೆ ತೆರಳುವ ಬಸ್‌ ಹತ್ತಿದ್ದರು. ಆ ಬಸ್ಸು ಬೆಳಗ್ಗೆ 5 ಗಂಟೆಗೆ ಶಿವಮೊಗ್ಗಕ್ಕೆ ಬಂದು ಶೃಂಗೇರಿ ಕಡೆಗೆ ತೆರಳುತ್ತಿತ್ತು. ತೀರ್ಥಹಳ್ಳಿ ತಾಲೂಕು ಹೆಗ್ಗೋಡು ಬಳಿ ಬಸ್‌ ತೆರಳುತ್ತಿದ್ದ ವೇಳೆ ಸುಹೈಬತ್‌ ಅವರಿಗೆ ಮನೆಯವರು ಕರೆ ಮಾಡಿದ್ದರು. ಎಚ್ಚರವಾದಾಗ ಪಕ್ಕದಲ್ಲಿ ಇಟ್ಟಿದ್ದ ಬ್ಯಾಗ್‌ ನಾಪತ್ತೆಯಾಗಿತ್ತು.

ಬ್ಯಾಗ್‌ನಲ್ಲಿ ಬಟ್ಟೆ, ಚಪ್ಪಲಿ, ಐ ಫೋನ್‌ ಚಾರ್ಜರ್‌, ಲ್ಯಾಪ್‌ಟಾಪ್‌ ಇತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಸ್ಸು ಶಿವಮೊಗ್ಗ ನಿಲ್ದಾಣಕ್ಕೆ ಹೋಗಿದ್ದಾಗ ಕಳ್ಳರು ತಮ್ಮ ಬ್ಯಾಗ್‌ ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಎಂದು ಆರೋಪಿಸಲಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗ ಸ್ಮಾರ್ಟ್‌ ಸಿಟಿ, ಎಂಎಲ್‌ಎ ಮೀಟಿಂಗ್‌, ನಾಲ್ಕು ಪ್ರಮುಖ ಪಾಯಿಂಟ್‌ ಚರ್ಚೆ

Leave a Comment