SHIVAMOGGA LIVE NEWS, 18 DECEMBER 2024
ಶಿವಮೊಗ್ಗ : ಸರ್ಕಾರಿ ಅಧಿಕಾರಿಯೊಬ್ಬರ ಮೇಲೆ ಆ್ಯಸಿಡ್ ದಾಳಿ ಮಾಡುವುದಾಗಿ ಬೆದರಿಕೆ ಒಡ್ಡಲಾಗಿದೆ. ಕಚೇರಿಗೆ ತಲುಪಿದ್ದ ಪತ್ರದಲ್ಲಿ (Letter) ಜೀವ ಬೆದರಿಕೆ ಒಡ್ಡಲಾಗಿದೆ ಎಂದು ಆರೋಪಿಸಲಾಗಿದೆ.
ಪತ್ರದಲ್ಲಿ ಏನೇನಿತ್ತು?
ಸಹಾಯಕ ಔಷಧ ನಿಯಂತ್ರಕರೊಬ್ಬರಿಗೆ ಬೆದರಿಕೆ ಒಡ್ಡಲಾಗಿದೆ. ನಮ್ಮವರಿಗೆ ಸೇರಿದ 14 ರಿಂದ 15 ಮೆಡಿಕಲ್ ಶಾಪ್ಗಳಿವೆ. ಅವುಗಳಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಬೇಕು. ನಿನ್ನ ಕೆಟ್ಟ ಕಾಲ ಶುರುವಾಗಿದೆ. ಎರಡ್ಮೂರು ತಿಂಗಳಿಂದ ನಿನ್ನನ್ನು ಹಿಂಬಾಲಿಸುತ್ತಿದ್ದೇವೆ. ಆ್ಯಸಿಡ್ ದಾಳಿ ಮಾಡಲು ಯುವಕರು ಸಜ್ಜಾಗಿದ್ದಾರೆ. ಪತ್ನಿಯ ಅಪಹರಣ ಮಾಡಿದರೆ ಏನು ಮಾಡುವೆ ಎಂದು ಬೆದರಿಕೆ ಒಡ್ಡಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದ ಕಾಲೇಜಿನಲ್ಲಿ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು
ಈ ಸಂಬಂಧ ಸಹಾಯಕ ಔಷಧ ನಿಯಂತ್ರಕರು ದೂರು ನೀಡಿದ್ದರು. ಬಳಿಕ ನ್ಯಾಯಾಲಯದ ಸೂಚನೆ ಮೇರೆಗೆ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200