ಚುನಾವಣೆಗೆ ಸಹಾಯ ಮಾಡಲಿಲ್ಲ ಅಂತಾ ಕೊಲೆ, ಶಿವಮೊಗ್ಗದಲ್ಲಿ ವ್ಯಕ್ತಿಗೆ ಜೀವಾವಧಿ ಶಿಕ್ಷೆ, ಏನಿದು ಕೇಸ್‌?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 15 JUNE 2024

SHIMOGA : ಚುನಾವಣೆಗೆ ಸಹಾಯ ಮಾಡಲಿಲ್ಲ ಎಂಬ ದ್ವೇಷಕ್ಕೆ ಆಯುಧದಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದ ವ್ಯಕ್ತಿಗೆ ಶಿವಮೊಗ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ (Life Term) ಮತ್ತು 23,500 ರೂ. ದಂಡ ವಿಧಿಸಿದೆ. ದಂಡ ಕಟ್ಟಲು ವಿಫಲನಾದಲ್ಲಿ ಹೆಚ್ಚುವರಿ 3 ವರ್ಷ ಸಾದಾ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.

ಹೊಳೆಬೆನವಳ್ಳಿದೊಡ್ಡ ತಾಂಡಾದ ಕುಮಾರನಾಯ್ಕ(43) ಶಿಕ್ಷೆಗೆ ಗುರಿಯಾದವ. ಈತ 2017ರಲ್ಲಿ ತಾಂಡಾದಲ್ಲಿ ನಡೆದಿದ್ದ ಪಂಚಾಯಿತಿ ಚುನಾವಣೆಗೆ ಸಹಾಯ ಮಾಡಲಿಲ್ಲ ಎಂಬ ಕಾರಣಕ್ಕೆ ಅದೇ ಗ್ರಾಮದ ಮಹೇಶ್‌ನಾಯ್ಕ (40) ಎಂಬಾತನ ಮೇಲೆ ಸಹಚರರೊಂದಿಗೆ ಸೇರಿ ಹಲ್ಲೆ ಮಾಡಿದ್ದ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಮಹೇಶ್ ನಾಯ್ಕ ಮೃತಪಟ್ಟಿದ್ದ.

ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ತನಿಖಾಧಿಕಾರಿಯಾಗಿದ್ದ ಶಿವಮೊಗ್ಗ ಗ್ರಾಮಾಂತರ ಸಿಪಿಐ ಲೋಕೇಶ್‌ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶೆ ಬಿ.ಆರ್.ಪಲ್ಲವಿ ಅವರು ಕುಮಾರ ನಾಯ್ಕನಿಗೆ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಅಭಿಯೋಜಕಿ ಪುಷ್ಪಾವತಿ ವಾದ ಮಂಡಿಸಿದ್ದರು.

ಇದನ್ನೂ ಓದಿ – ವಿದ್ಯಾನಗರ ದರೋಡೆ ಕೇಸ್‌, ಲಲ್ಲಾಗೆ ಐದು ವರ್ಷ ಕಠಿಣ ಜೈಲು, 8 ಸಾವಿರ ಫೈನ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 15, 2024

Leave a Comment