ವಡ್ಡಿನಕೊಪ್ಪ ಬಳಿ ಪತ್ನಿ, ಪ್ರಿಯಕರನನ್ನು ಕೊಚ್ಚಿ ಕೊಂದಿದ್ದ ಪತಿಗೆ ಶಿಕ್ಷೆ ಪ್ರಕಟ, ಏನಿದು ಪ್ರಕರಣ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 11 AUGUST 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SHIMOGA : ವಡ್ಡಿನಕೊಪ್ಪ (Vaddinakoppa) ಸಮೀಪ ಪತ್ನಿ ಮತ್ತು ಆಕೆಯ ಪ್ರಿಯಕರನನ್ನು (Lover) ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದ ಪತಿ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಲಾಗಿದೆ. ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಯಾರಿಗೆಲ್ಲ ಶಿಕ್ಷೆಯಾಗಿದೆ?

ಶಿವಮೊಗ್ಗ ವೆಂಕಟೇಶ ನಗರದ ಕೆ.ಕಾರ್ತಿಕ್‌ (28), ಆತನ ಸ್ನೇಹಿತರಾದ ಹೊಸಮನೆಯ ವಿ.ಭರತ್‌ (23) ಮತ್ತು ರಾಜೇಂದ್ರ ನಗರದ ಸಂದೀಪ್‌ (21) ಶಿಕ್ಷೆಗೆ ಒಳಗಾದವರು. ಕಾರ್ತಿಕ್‌ನ ಪತ್ನಿ ರೇವತಿ ಮತ್ತು ವಿಜಯ್‌ ಎಂಬಾತನನ್ನು 2017ರ ಸೆ.4ರಂದು ಕೊಲೆ ಮಾಡಲಾಗಿತ್ತು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಮಹಾ ಧರಣಿ, 11 ಸಂಘಟನೆಗಳು ಭಾಗಿ, ಬೇಡಿಕೆಗಳೇನು?

ಹತ್ಯೆಗೆ ಕಾರಣವೇನು?

ಕಾರ್ತಿಕ್‌ನ ಪತ್ನಿ ರೇವತಿ ಶ್ರೀರಾಮನಗರದ ವಿಜಯ್‌ನನ್ನು ಪ್ರೀತಿಸುತ್ತಿದ್ದಳು. ಈ ವಿಚಾರ ತಿಳಿದು ವಡ್ಡಿನಕೊಪ್ಪ ಸಮೀಪ ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರನ್ನು ಹತ್ಯೆ ಮಾಡಲಾಗಿತ್ತು. ಹತ್ಯೆ ಸಂಬಂಧ ವಿಜಯ್‌ ತಂದೆ ನೀಡಿದ್ದ ದೂರಿನ ಆಧಾರದಲ್ಲಿ ತುಂಗಾ ನಗರ ಠಾಣೆ ಪೊಲೀಸರು ತನಿಖೆ ನಡೆಸಿದ್ದರು.

ಇನ್ಸ್‌ಪೆಕ್ಟರ್‌ ಮಹಾಂತೇಶ್‌ ಬಿ.ಹೋಳಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಧೀಶರಾದ ಕೆ.ಮಾನು ಅವರು ವಿಚಾರಣೆ ನಡೆಸಿದರು. ಆರೋಪ ಸಾಬೀತಾದ ಹಿನ್ನೆಲೆ ಮೂವರಿಗೆ ಜೀವಾವಧಿ ಶಿಕ್ಷೆ, 1 ಲಕ್ಷ ರೂ. ದಂಡ ವಿಧಿಸಿದ್ದಾರೆ. ದಂಡ ಕಟ್ಟಲು ವಿಫಲವಾದರೆ ಹೆಚ್ಚುವರಿ ಆರು ತಿಂಗಳು ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರಿ ಅಭಿಯೋಜಕರಾಗಿ ಶಾಂತರಾಜ್‌ ಅವರು ವಾದ ಮಂಡಿಸಿದ್ದರು.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment