ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಅಕ್ಟೋಬರ್ 2020
ಕುವೆಂಪು ರಸ್ತೆಯಲ್ಲಿ ಕೆಲಸ ಮಾಡುವಾಗ ವಿದ್ಯುತ್ ಸ್ಪರ್ಶದಿಂದ ತೀವ್ರ ಗಾಯಗೊಂಡಿದ್ದ ಲೈನ್ಮನ್ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ವಿದ್ಯಾನಗರದ ಉಮಾಶಂಕರ್ (42) ಮೃತರು. ಅಕ್ಟೋಬರ್ 8ರಂದು ಸಂಜೆ ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿರುವ 11 ಕೆ.ವಿ. ವಿದ್ಯುತ್ ಲೈನ್ ರಿಪೇರಿ ಮಾಡುತ್ತಿದ್ದರು. ಈ ವೇಳೆ ವಿದ್ಯತ್ ಶಾಕ್ನಿಂದಾಗಿ ಕಂಬದ ಮೇಲೆಯೆ ಸಿಕ್ಕಿಬಿದ್ದಿದ್ದರು.
ಅಗ್ನಿಶಾಮಕ ಸಿಬ್ಬಂದಿ ಉಮಾಶಂಕರ್ ಅವರನ್ನು ಕಂಬದ ಮೇಲಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲು ಮಾಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ಉಮಾಶಂಕರ್ ಅವರು ಬುಧವಾರ ಮೃತಪಟ್ಟಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















