ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 01 FEBRUARY 2021
ಸಾಲದ ಹಣ ಹಿಂತಿರುಗಿಸುವುದಾಗಿ ನಂಬಸಿ ಸಾಲ ಕೊಟ್ಟವರ ಖಾತೆಯಿಂದಲೇ ಹತ್ತು ಸಾವಿರ ರೂ. ವರ್ಗಾಯಿಸಿಕೊಂಡು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೇಗಾಯ್ತು ವಂಚನೆ?
ಬೆಂಗಳೂರಿನ ಮುರ್ತುಜಾ ಅಲಿಸ್ ಎಂಬುವವರು ಶಿವಮೊಗ್ಗದ ಫಿರೋಜ್ ಖಾನ್ ಎಂಬುವವರಿಂದ 80 ಸಾವಿರ ರೂ. ಸಾಲ ಪಡೆದಿದ್ದರು. ಹಣ ಹಿಂತಿರುಗಿಸುವಂತೆ ಫಿರೋಜ್ ಖಾನ್ ಅವರು ತಿಳಿಸಿದ್ದರು.
ಹಣ ಹಿಂತಿರುಗಿಸುವುದಾಗಿ ನಂಬಿಸಿ ಫಿರೋಜ್ ಖಾನ್ ಅವರ ಆಧಾರ್ ಕಾರ್ಡ್ ನಂಬರ್, ಬ್ಯಾಂಕ್ ಖಾತೆ ವಿವರ ಮತ್ತು ಮೊಬೈಲ್ಗೆ ಬಂದ ಒಟಿಪಿ ನಂಬರ್ ಪಡೆದುಕೊಂಡಿದ್ದಾರೆ. ಕೆಲವೇ ಹೊತ್ತಿನಲ್ಲಿ ಫಿರೋಜ್ ಖಾನ್ ಅವರ ಖಾತೆಯಿಂದ 10 ಸಾವಿರ ರೂ. ಹಣವನ್ನು ಮುರ್ತುಜಾ ಅಲಿಸ್ ಅವರ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ಈ ಸಂಬಂಧ ತನಿಖೆ ನಡೆಸುವಂತೆ ಫಿರೋಜ್ ಖಾನ್ ಅವರು ದೂರು ನೀಡಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






