Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಜನ, ಜನಪ್ರತಿನಿಧಿಗಳು, ಮೆಗ್ಗಾನ್‌ ಸಿಬ್ಬಂದಿ, ಪೊಲೀಸರಿಂದಾಗಿ ಉಳಿಯಿತು ಹಲವರ ಪ್ರಾಣ, ಸಿಕ್ತು ಸೂಕ್ತ ಚಿಕಿತ್ಸೆ, ಹೇಗದು?

ಜನ, ಜನಪ್ರತಿನಿಧಿಗಳು, ಮೆಗ್ಗಾನ್‌ ಸಿಬ್ಬಂದಿ, ಪೊಲೀಸರಿಂದಾಗಿ ಉಳಿಯಿತು ಹಲವರ ಪ್ರಾಣ, ಸಿಕ್ತು ಸೂಕ್ತ ಚಿಕಿತ್ಸೆ, ಹೇಗದು?

12/05/2023 10:43 AM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 12 MAY 2023

SHIMOGA : ಚೋರಡಿಯ ಕುಮದ್ವತಿ ಸೇತುವೆ ಮೇಲೆ ಭೀಕರ ಅಪಘಾತ (Mishap) ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ. 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದೆ. ಘಟನೆಯ ಮಾಹಿತಿ ಲಭಿಸುತ್ತಿದ್ದಂತೆ ಜನರು, ಜನಪ್ರತಿನಿಧಿಗಳು, ಆಸ್ಪತ್ರೆ ಸಿಬ್ಬಂದಿಯ ಕ್ಷಿಪ್ರ ಕಾರ್ಯಾಚರಣೆ ಹಲವರ ಪ್ರಾಣ ಉಳಿಸಿದೆ. ಸೂಕ್ತ ಸಮಯಕ್ಕೆ ಸಮರ್ಪಕ ಚಿಕಿತ್ಸೆ ಸಿಗುವಂತೆ ಮಾಡಿದೆ.

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

Injured-admitted-to-Mc-Gann-Hospital-after-choradi-mishap

ಯಾರೆಲ್ಲ ಹೇಗೆಲ್ಲ ನೆರವಾದರು?

ಅಪಘಾತದಲ್ಲಿ (Mishap) ಗಾಯಗೊಂಡವರಿಗೆ ಸ್ಥಳೀಯರು, ಜನ ಪ್ರತಿನಿಧಿಗಳು, ಅಧಿಕಾರಿಗಳು, ಮೆಗ್ಗಾನ್‌ ಆಸ್ಪತ್ರೆ ಸಿಬ್ಬಂದಿ ತುರ್ತು ನೆರವು ನೀಡಿದ್ದಾರೆ. ಇದರಿಂದ ಹಲವರಿಗೆ ಸರಿಯಾದ ಸಮಯಕ್ಕೆ ಸರಿಯಾದ ಚಿಕಿತ್ಸೆ ಲಭಿಸಿದೆ.

ಒಂದಾಗಿ ನೆರವಾದ ಸ್ಥಳೀಯರು

ಶಿವಮೊಗ್ಗ ತಾಲೂಕು ಚೋರಡಿಯ ಕುಮದ್ವತಿ ಸೇತುವೆ ಬಳಿ ಗುರುವಾರ ಸಂಜೆ 6.45ರ ಹೊತ್ತಿಗೆ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿಯಾಗಿವೆ. ವಿಚಾರ ಗೊತ್ತಾಗುತ್ತಿದ್ದಂತೆ ಸುತ್ತಮುತ್ತಲ ಗ್ರಾಮಸ್ಥರು. ಅದೇ ಮಾರ್ಗದಲ್ಲಿ ತೆರಳುತ್ತಿದ್ದ ವಾಹನ ಸವಾರರು ಕೂಡಲೆ ನೆರವಾಗಿದ್ದಾರೆ. ಗಾಯಾಳುಗಳನ್ನು ರಕ್ಷಿಸಿದ್ದಾರೆ. ಖಾಸಗಿ ವಾಹನಗಳಲ್ಲಿಯೇ ಆಯನೂರು ಆರೋಗ್ಯ ಕೇಂದ್ರ ಮತ್ತು ಮೆಗ್ಗಾನ್‌ ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಯಾಳುಗಳಿಗೆ ಧೈರ್ಯ ಹೇಳಿದ್ದಾರೆ, ಆತಂಕ ನಿವಾರಿಸಿದ್ದಾರೆ.
WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ಜಿ.ಪಂ ಮಾಜಿ ಸದಸ್ಯನ ಸಮಯ ಪ್ರಜ್ಞೆ

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತಮ್ಮಡಿಹಳ್ಳಿ ನಾಗರಾಜ್‌ ಅವರು ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಸಭೆಗೆ ತೆರಳಿದ್ದರು. ಅಪಘಾತದ ವಿಚಾರ ತಿಳಿಯುತ್ತಿದ್ದಂತೆ ಮೆಗ್ಗಾನ್‌ ಆಸ್ಪತ್ರೆಗೆ ತೆರಳಿ ವೈದ್ಯರಿಗೆ ಮಾಹಿತಿ ನೀಡಿದರು. ತಕ್ಷಣಕ್ಕೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಿದರು. ಅಲ್ಲದೆ ಆಂಬುಲೆನ್ಸ್‌ ಸಿಬ್ಬಂದಿಯನ್ನು ಚೋರಡಿಗೆ ತೆರಳುವಂತೆ ನೋಡಿಕೊಂಡರು. ಇದರಿಂದ ಸೂಕ್ತ ಸಮಯಕ್ಕೆ ಆಂಬುಲೆನ್ಸ್‌ಗಳು ಘಟನಾ ಸ್ಥಳಕ್ಕೆ ತಲುಪಲು ಅನುಕೂಲವಾಯಿತು.

Two-Bus-Collides-at-Choradi-in-Shimoga.

ಹರಸಾಹಸ ಪಟ್ಟ ಪೊಲೀಸರು

ಎರಡು ಬಸ್ಸುಗಳು ಒಂದರೊಳಗೆ ಒಂದು ನುಗ್ಗಿದ್ದವು. ಸೀಟಿನಲ್ಲಿಯೇ ಎರಡು ಬಸ್ಸಿನ ಚಾಲಕರು ಸಿಕ್ಕಿಬಿದ್ದಿದ್ದರು. ಅವರ ರಕ್ಷಣೆಗೆ ಹರಸಾಹಸ ಪಡಬೇಕಾಯಿತು. ಸ್ಥಳೀಯರೊಂದಿಗೆ ಪೊಲೀಸರು ಕೂಡ ಹರಸಾಹಸಪಟ್ಟು ಚಾಲಕರನ್ನು ರಕ್ಷಿಸಿದರು. ಜೆಸಿಬಿ ತರಿಸಿ ರಕ್ಷಣಾ ಕಾರ್ಯ ನಡೆಸಿದರು. ಅಪಘಾತದಿಂದಾಗಿ ಶಿವಮೊಗ್ಗ – ಸಾಗರ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋ ಮೀಟರ್‌ಗಟ್ಟಲೆ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಬಸ್ಸುಗಳನ್ನು ತೆರವು ಮಾಡಿ, ಸಂಚಾರ ದಟ್ಟಣೆ ನಿಯಂತ್ರಿಸಿದರು.

Bus-Collides-at-Choradi-in-Shimoga-Taluk

ಮೆಗ್ಗಾನ್‌ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ

ಭೀಕರ ಅಪಘಾತದ ಮಾಹಿತಿ ಲಭಿಸುತ್ತಿದ್ದಂತೆ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದರು. ತುರ್ತು ಚಿಕಿತ್ಸಾ ವಿಭಿಗದಲ್ಲಿ ವೈದ್ಯರು, ಅಗತ್ಯ ಸಿಬ್ಬಂದಿ ನಿಯೋಜನೆ ಮಾಡಲಾಯಿತು. ಆಸ್ಪತ್ರೆಯ ನಾಲ್ಕನೆ ಅಂತಸ್ತಿನಲ್ಲಿ ಕೆಲವೇ ನಿಮಿಷದಲ್ಲಿ ವಿಶೇಷ ವಾರ್ಡ್‌ ಸಿದ್ದಪಡಿಸಿದರು. ಗಾಯಾಳುಗಳು ಬರುತ್ತಿದ್ದಂತೆ ಅವರಿಗೆ ಚಿಕಿತ್ಸೆ ಆರಂಭಿಸಲಾಯಿತು. ವಿಶೇಷ ವಾರ್ಡ್‌ನ ಬೆಡ್‌ಗೆ ಒಬ್ಬರಂತೆ ದಾದಿಯರು, ವಾರ್ಡ್‌ ಬಾಯ್‌ಗಳು, ವೈದ್ಯರು ಚಿಕಿತ್ಸೆ ನೀಡಿದರು.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ಇನ್ನು, ತಮ್ಮವರು ಅಪಘಾತಕ್ಕೀಡಾದ ವಿಚಾರ ತಿಳಿದು ಆಘಾತಕ್ಕೊಳಗಾಗಿ ಬಂದಿದ್ದ ಕುಟುಂಬದವರಿಗೆ ಆಸ್ಪತ್ರೆಯ ಸಿಬ್ಬಂದಿ, ಸೆಕ್ಯೂರಿಟಿಗಳೇ ಸಮಾಧಾನಪಡಿಸಿ, ಧೈರ್ಯ ಹೇಳಿದರು. ಅಪಘಾತದಿಂದ ಶಾಕ್‌ಗೆ ಒಳಗಾಗಿದ್ದವರಿಗೆ ಕೂಡಲೆ ನೀರು, ಹಾಲು, ಬ್ರೆಡ್‌ ವ್ಯವಸ್ಥೆ ಮಾಡಿದರು.

ಇದನ್ನೂ ಓದಿ – ಚೋರಡಿ ಬಳಿ ಭೀಕರ ಅಪಘಾತ, ಪ್ರತ್ಯಕ್ಷದರ್ಶಿ ಹೇಳಿದ್ದೇನು? ಹೇಗಾಯ್ತ ಆಕ್ಸಿಡೆಂಟ್‌?

ಫೋನ್‌ ಮೂಲಕ ಧೈರ್ಯ ಹೇಳಿದ ಎಂಪಿ

ಘಟನೆ ಮಾಹಿತಿ ಸಿಗುತ್ತಿದ್ದಂತೆ ಸಂಸದ ಬಿ.ವೈ.ರಾಘವೇಂದ್ರ ಮತ್ತು ಸಹೋದರ ಬಿ.ವೈ.ವಿಜಯೇಂದ್ರ ಅವರು ಮೆಗ್ಗಾನ್‌ ಆಸ್ಪತ್ರೆಗೆ ಭೇಟಿ ನೀಡಿದರು. ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಅಲ್ಲದೆ ಅವರ ಕುಟುಂಬದವರಿಗೆ ಕರೆ ಮಾಡಿ, ಅಪಘಾತದ ಮಾಹಿತಿ ತಿಳಿಸಿ, ಧೈರ್ಯ ಹೇಳಿದರು.

ಇದನ್ನೂ ಓದಿ – ಚೋರಡಿ ಅಪಘಾತ ಕೇಸ್‌, ಆಸ್ಪತ್ರೆಗೆ ಸಂಸದ, ಡಿಸಿ, ಎಸ್‌ಪಿ, ಅಭ್ಯರ್ಥಿಗಳು ದೌಡು, ಯಾರೆಲ್ಲ ಏನೇನು ಹೇಳಿದರು?

Shivamogga Live | Whatsapp7411700200
CLICK HERE TO JOIN SHIVAMOGGA LIVE WHATSAPP GROUP

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Collision-Between-bUses-at-Choradi-in-Shimoga ಚೋರಡಿಯಲ್ಲಿ ಭೀಕರ ಅಪಘಾತ ಕೇಸ್‌, ಮೃತರ ಗುರುತು ಪತ್ತೆ, ಮೆಗ್ಗಾನ್‌ಗೆ ದಾಖಲಾದ ಗಾಯಾಳುಗಳೆಷ್ಟು?
Next Article Shivamogga Live Today News ಶಿವಮೊಗ್ಗ ಜಿಲ್ಲೆಯ ಟಾಪ್‌ 10 ನ್ಯೂಸ್‌ | 12 ಮೇ 2023

ಇದನ್ನೂ ಓದಿ

government-employees-state-level-sports-at-nehru-stadium
SHIVAMOGGA CITY

ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ, ಗೆಲ್ಲುವ ಛಲದೊಂದಿಗೆ ಅಖಾಡಕ್ಕಿಳಿದ ಸರ್ಕಾರಿ ನೌಕರರು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
20/05/2025
stop-sand-mining-at-kudli-in-shimoga
SHIVAMOGGA CITY

ಕೂಡ್ಲಿಯಲ್ಲಿ ಮರಳು ಗಣಿಗಾರಿಕೆಗೆ ಟೆಂಡರ್‌, ತಕ್ಷಣ ಕೈ ಬಿಡುವಂತೆ ಪಟ್ಟು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
20/05/2025
Police-Jeep-With-Light-New.
CRIME DIARYSHIVAMOGGA CITY

ATMನಲ್ಲಿ ಡ್ರಾ ಆಗದಿದ್ದರು ಅಕೌಂಟ್‌ನಲ್ಲಿ ಹಣ ಕಟ್‌, CCTV ಚೆಕ್‌ ಮಾಡಿದ ಬ್ಯಾಂಕ್‌ ಸಿಬ್ಬಂದಿ ಆಘಾತ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/05/2025
crime name image
CRIME DIARYSHIVAMOGGA CITY

ಪೂಜೆಗೆ ತೆರಳಿದ್ದ ದಂಪತಿಗೆ ಬೆಳ್ಳಂಬೆಳಗ್ಗೆ ಪಕ್ಕದ ಮನೆಯವರಿಂದ ಬಂತು ಫೋನ್‌, ವಾಪಸ್‌ ಬಂದಾಗ ಕಾದಿತ್ತು ಶಾಕ್

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/05/2025
HIVAMOGGA-NEWS- map
SHIVAMOGGA CITY

ಐಟಿಐ ಪಾಸ್‌ ಆದವರಿಗೆ ಹೆಚ್‌ಎಎಲ್‌ನಲ್ಲಿ ಅಪ್ರೆಂಟಿಸ್‌ ತರಬೇತಿ, ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/05/2025
SHIMOGA-NEWS-UPDATE
SHIVAMOGGA CITY

ಕಾರ್ಮಿಕರಿಗೆ ತರಬೇತಿ, ಪ್ರಮಾಣ ಪತ್ರ, ಆರ್‌ಪಿಎಲ್ ಕಿಟ್ ವಿತರಣೆ, ಹೆಸರು ನೋಂದಣಿಗೆ ಸೂಚನೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?