ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಡಿಸೆಂಬರ್ 2021
ಶಿವಮೊಗ್ಗ ನಗರದ ವಿವಿಧ ಲಾಡ್ಜ್’ಗಳಲ್ಲಿ ಪೊಲೀಸರು ಇವತ್ತು ದಿಢೀರ್ ತಪಾಸಣೆ ಆರಂಭಿಸಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಅವರ ಸೂಚನೆ ಮೇರೆಗೆ ತಪಾಸಣಾ ಕಾರ್ಯ ನಡೆಯುತ್ತಿದೆ.
ಶಿವಮೊಗ್ಗ ಬಸ್ ನಿಲ್ದಾಣ ಸುತ್ತಮುತ್ತ ವಿವಿಧ ಲಾಡ್ಜ್’ಗಳಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಅವರ ಸೂಚನೆ ಮೇರೆಗೆ ತಪಾಸಣೆ ನಡೆಸಲಾಯಿತು. ಡಿವೈಎಸ್’ಪಿ ಪ್ರಶಾಂತೋ ಮುನ್ನೋಳಿ, ಇನ್ಸ್’ಪೆಕ್ಟರ್ ಹರೀಶ್ ಪಟೇಲ್, ದೊಡ್ಡಪೇಟೆ ಠಾಣೆ ಸಬ್ಬಂದಿ ಪರಿಶೀಲನೆ ನಡೆಸಿದರು.
ತಪಾಸಣೆಗೆ ಕಾರಣವೇನು?
ಲಾಡ್ಜ್’ಗಳಲ್ಲಿ ಅಕ್ರಮ ಮತ್ತು ಅನೈತಿಕ ಚಟುವಟಿಕೆ ನಡೆಯುತ್ತಿರುವ ಸಂಬಂಧ ಆರೋಪಗಳು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ವಿವಿಧೆಡೆ ಎಲ್ಲಾ ಲಾಡ್ಜ್’ಗಳಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ಈ ಹಿಂದೆ ಸರ್ಕಾರ ಮತ್ತು ಪೊಲೀಸ್ ಇಲಾಖೆ ಒದಗಿಸಿರುವ ಗೈಡ್ ಲೈನ್ ಪಾಲನೆ ಮಾಡಲಾಗುತ್ತಿದೆಯೆ ಎಂದು ಪರಿಶೀಲಿಸಿಲು ತಪಾಸಣೆ ಕಾರ್ಯ ನಡೆಸಲಾಯಿತು.
ಇದನ್ನೂ ಓದಿ | ಶಿವಮೊಗ್ಗ ಬಸ್ ನಿಲ್ದಾಣದ ಬಳಿ ಲಾಡ್ಜ್’ನಲ್ಲಿ ನಿವೃತ್ತ ಎಂಜಿನಿಯರ್ ಆತ್ಮಹತ್ಯೆ
ಏನೆಲ್ಲ ತಪಸಾಣೆ ಮಾಡಿದರು?
ಲಾಡ್ಜ್’ಗಳಲ್ಲಿ ರಿಜಿಸ್ಟರ್ ಸರಿಯಾಗಿ ನಿರ್ವಹಣೆ ಮಾಡಲಾಗುತ್ತಿದೆಯೆ ಎಂದು ಪರಿಶೀಲಿಸಿದರು. ಲಾಡ್ಜ್’ನಲ್ಲಿ ಯಾರೆಲ್ಲ ತಂಗಿದ್ದಾರೆ, ಅವರು ಒದಗಿಸಿರುವ ದಾಖಲೆಗಳೇನು ಎಂಬುದನ್ನು ವೀಕ್ಷಿಸಿದರು. ಅಲ್ಲದೆ ಲಾಡ್ಜ್’ನಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮರಾಗಳನ್ನು ಪೊಲೀಸರು ಪರಿಶೀಲನೆ ಮಾಡಲಾಯಿತು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200