ಕಂತೆ ಕಂತೆ ದುಡ್ಡು, ಲಕ್ಷ ಲಕ್ಷದ ಚಿನ್ನ, ಶಿವಮೊಗ್ಗದ ಅಧಿಕಾರಿಯ ಮನೆ, ಲಾಕರ್‌ನಲ್ಲಿ ಸಿಕ್ಕ ಹಣ ಸೀಜ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 22 JULY 2024

LOKAYUKTA RAID : ಶಿವಮೊಗ್ಗದಲ್ಲಿ  ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಪ್ರಕಾಶ್‌.ಜಿ.ಎನ್.‌ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಪ್ರಕರಣ ದಾಖಲು ಮಾಡಿಕೊಂಡು ಮೂರು ಕಡೆ ದಾಳಿ ನಡೆಸಿ ಪರಿಶೀಸಲಿದ್ದರು.

ಎರಡು ಕೋಟಿ ಅಕ್ರಮ ಆಸ್ತಿ

ಎರಡು ದಿನ ದಾಳಿ ಮತ್ತು ಪರಿಶೀಲನೆ ವೇಳೆ ಅಂದಾಜು ಎರಡು ಕೋಟಿ ರೂ. ಅಕ್ರಮ ಆಸ್ತಿ ಸಂಪಾದಿಸಿರುವುದು ಬೆಳಕಿಗೆ ಬಂದಿದೆ ಎಂದು ಲೋಕಾಯುಕ್ತ ಇಲಾಖೆ ಪ್ರಕಟಣೆ ಮೂಲಕ ತಿಳಿಸಿದೆ. ದಾಳಿ ವೇಳೆ ಸಿಕ್ಕ 44 ಲಕ್ಷ ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ.

lokayukta-raid-on-Prakash-at-shimoga-found-money.

ದಾಳಿಯ ಮೊದಲ ದಿನ ಸಿಕ್ಕಿದ್ದು

ದಾಳಿ ವೇಳೆ ಉಪ ನಿರ್ದೇಶಕ ಪ್ರಕಾಶ್‌ಗೆ ಸಂಬಂಧಿಸಿದ 1 ಖಾಲಿ ನಿವೇಶನ, 2 ಮನೆಗಳು, 2.8 ಎಕರೆ ಕೃಷಿ ಜಮೀನು ಪತ್ತೆಯಾಗಿದೆ. ಇದರ ಅಂದಾಜು ಮೌಲ್ಯ 1.57 ಕೋಟಿ ರೂ. ಇನ್ನು, ವಾಸದ ಮನೆಯಲ್ಲಿ 38.32 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಪತ್ತೆಯಾಗಿದ್ದವು. 5.20 ಲಕ್ಷ ಮೌಲ್ಯದ ವಾಹನಗಳು, 11.30 ಲಕ್ಷ ರೂ. ಮೌಲ್ಯದ ಗೃಹಪಯೋಗಿ ವಸ್ತುಗಳು ಮತ್ತು ರೂ 12.86 ಲಕ್ಷ ರೂ. ನಗದು ಹಣ ಪತ್ತೆಯಾಗಿತ್ತು ಎಂದು ತಿಳಿಸಲಾಗಿದೆ.

lokayukt trap

ದಾಳಿಯ ಎರಡನೇ ದಿನ ಲಾಕರ್‌ಗಳು ಓಪನ್‌

ಜು.20ರಂದು ಪ್ರಕಾಶ್ ಜಿ.ಎನ್ ಪತ್ನಿ ಹೆಸರಿನಲ್ಲಿದ್ದ ಬ್ಯಾಂಕ್ ಲಾಕರ್‌ ಪರಿಶೀಲಿಸಲಾಯಿತು. 32.06 ಲಕ್ಷ ರೂ. ನಗದು, 18.48 ಲಕ್ಷ ರೂ. ಚಿನ್ನಾಭರಣ ಪತ್ತೆಯಾಗಿದೆ.

Lokayukta-Raid-on-Horticulture-department-assitant-director

ಲೋಕಾಯುಕ್ತ ಶಿವಮೊಗ್ಗದ ಪೊಲೀಸ್ ಅಧೀಕ್ಷಕ ಮಂಜುನಾಥ್ ಚೌದರಿ ಪ್ರಕರಣ ದಾಖಲಿಸಿದ್ದಾರೆ. ಲೋಕಾಯುಕ್ತ ಪೊಲೀಸ್‌ ನಿರೀಕ್ಷಕ ಹೆಚ್.ಎಸ್.ಸುರೇಶ್ ತನಿಖೆ ಮುಂದುವರೆಸಿದ್ದಾರೆ. ಶಿವಮೊಗ್ಗ, ಹಾವೇರಿಯ ಲೋಕಾಯುಕ್ತ ಪೊಲೀಸರು ದಾಳಿಯಲ್ಲಿ ಭಾಗವಹಿಸಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.  

ಇದನ್ನೂ ಓದಿ ⇓

ವಿಧಾನಸಭೆಯಲ್ಲಿ ಶಿವಮೊಗ್ಗ ಉಪ ನೋಂದಣಾಧಿಕಾರಿ ಕಚೇರಿ ಕುರಿತು ಮಹತ್ವದ ಚರ್ಚೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 22, 2024

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

Leave a Comment