SHIVAMOGGA LIVE NEWS | 22 DECEMBER 2023
ANAVATTI : ಎಲೆಕ್ಟ್ರಿಕ್ ಕಾಂಟ್ರಾಕ್ಟರ್ ಒಬ್ಬರಿಂದ 20 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಮೆಸ್ಕಾಂ ಇಲಾಖೆ ಎಇಇ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸೊರಬ ತಾಲೂಕು ಆನವಟ್ಟಿಯ ಮೆಸ್ಕಾಂ ಎಇಇ ಜಿ.ರಮೇಶ್ ಎಂಬುವವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದು ಪ್ರಕರಣ ದಾಖಲಿಸಿದ್ದಾರೆ.
ಲಂಚಕ್ಕೆ ಬೇಡಿಕೆ ಇಟ್ಟಿದ್ದೇಕೆ?
ಸೊರಬದ ಪ್ರದೀಪ್ ಅಕ್ರಮ ಸಕ್ರಮ ಯೋಜನೆ ಅಡಿ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಯ ಗುತ್ತಿಗೆ ಪಡೆದಿದ್ದರು. ಲೈನ್ ಕೆಲಸ ಪೂರ್ಣಗೊಳಿಸಲು 25 ಕೆ.ವಿ.ಯ ಟಿ.ಸಿ.ಗಳನ್ನು ಅಳವಡಿಸುವ ಕಾಮಗಾರಿ ಬಾಕಿ ಇತ್ತು. ಈ ಹಿನ್ನೆಲೆ 7 ಟಿ.ಸಿ.ಗಳನ್ನು ಒದಗಿಸುವಂತೆ ಮನವಿ ಮಾಡಿದ್ದರು. ಇದಕ್ಕಾಗಿ 20 ಸಾವಿರ ರೂ. ಹಣ ನೀಡುವಂತೆ ಪ್ರದೀಪ್ಗೆ ಎಇಇ ರಮೇಶ್ ಸೂಚಿಸಿದ್ದರು. ಈ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳಿಗೆ ಪ್ರದೀಪ್ ದೂರು ನೀಡಿದ್ದರು.
ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅಧಿಕಾರಿ
ಎಇಇ ರಮೇಶ್ ತಮ್ಮ ಕಚೇರಿಯಲ್ಲಿ ಇವತ್ತು ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಪೊಲೀಸ್ ಅಧೀಕ್ಷಕ ವಾಸುದೇವರಾಮ ಮಾರ್ಗದರ್ಶನದಲ್ಲಿ ಉಪಾಧೀಕ್ಷಕ ಉಮೇಶ್ ಈಶ್ವರ್ ನಾಯ್ಕ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.
ದಾಳಿಯಲ್ಲಿ ಸಿಬ್ಬಂದಿ ಮಹಂತೇಶ, ಸುರೇಂದ್ರ, ಬಿ.ಟಿ. ಚನ್ನೇಶ, ಪ್ರಶಾಂತ್ಕುಮಾರ್, ಅರುಣ್ಕುಮಾರ್, ದೇವರಾಜ, ರಘುನಾಯ್ಕ, ಪುಟ್ಟಮ್ಮ, ಕೆ.ಸಿ. ಜಯಂತ, ಗಂಗಾಧರ, ವಿ. ಗೋಪಿ, ಮತ್ತು ಪ್ರದೀಪ್ ಕುಮಾರ್ ಭಾಗವಹಿಸಿದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ, ಇಬ್ಬರು ವಶಕ್ಕೆ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200