SHIVAMOGGA LIVE NEWS | 30 MAY 2024

SHIMOGA : ಜಮೀನು ಖಾತೆ ಮಾಡಿಕೊಡಲು ಆರು ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ (Trap) ನಡೆಸಿ, ಗ್ರಾಮ ಆಡಳಿತ ಅಧಿಕಾರಿಯನ್ನು ಬಂಧಿಸಿದ್ದಾರೆ. ಶಿವಮೊಗ್ಗ ತಾಲೂಕು ಕಸಬಾ ಹೋಬಳಿ ಗಾಡಿಕೊಪ್ಪ ವೃತ್ತದ ಕಚೇರಿಯಲ್ಲಿ ದಾಳಿ ನಡೆಸಲಾಗಿದೆ.
ಕೃಷಿ ನಗರದ ಸಂಕೇತ್ ಎಂಬುವವರು ತಮ್ಮ ತಾಯಿ ಹೆಸರಿಗೆ ಜಮೀನಿನ ನೋಂದಣಿ ಮಾಡಿಸಿದ್ದರು. ಅದರ ಖಾತೆ ಮಾಡಿಕೊಡುವಂತೆ ಗ್ರಾಮ ಆಡಳಿತ ಅಧಿಕಾರಿ ಸುರೇಶ್ ಅವರಿಗೆ ಕೇಳಿಕೊಂಡಿದ್ದರು. ಇದಕ್ಕೆ ಆರು ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಸಂಕೇತ್ ಅವರು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ಇವತ್ತು ಹಣ ಪಡೆಯುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ‘ಶೆಟ್ಟರ ಸಂತೆ’, ವಿವಿಧ ತಿಂಡಿ, ತಿನಿಸು, ಡ್ರೆಸ್ ಮೆಟೀರಿಯಲ್ ಪ್ರದರ್ಶನ, ಮಾರಾಟ, ಎಲ್ಲಿ? ಯಾವಾಗ?
ಲೋಕಾಯುಕ್ತ ಇನ್ಸ್ಪೆಕ್ಟರ್ ವೀರಬಸಪ್ಪ ಎಲ್.ಕುಸಲಾಪುರ ತನಿಖೆ ನಡೆಸುತ್ತಿದ್ದಾರೆ. ಅಧೀಕ್ಷಕ ಮಂಜುನಾಥ್ ಚೌಧರಿ ಎಂ.ಹೆಚ್, ಪೊಲೀಸ್ ಉಪಾಧೀಕ್ಷಕ ಉಮೇಶ ಈಶ್ವರ ನಾಯ್ಕ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಕಚೇರಿ ಸಿಬ್ಬಂದಿ ವಿ.ಎ.ಮಹಂತೇಶ, ಯೋಗೇಶ್, ಸುರೇಂದ್ರ ಹೆಚ್.ಜಿ., ಬಿ.ಟಿ ಚನ್ನೇಶ್, ಪ್ರಶಾಂತ್ ಕುಮಾರ್, ರಘುನಾಯ್ಕ, ದೇವರಾಜ್, ಗಂಗಾಧರ, ಪ್ರದೀಪ್, ಗೋಪಿ.ವಿ, ಜಯಂತ್ ಇವರುಗಳು ಹಾಜರಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200