SHIMOGA NEWS, 23 OCTOBER 2024 : ಲಾರಿಯಿಂದ ಬ್ಯಾಟರಿ (Battery) ಕಳವು ಮಾಡಿಕೊಂಡು ಹೋಗುವಾಗ, ಸೆಕ್ಯೂರಿಟಿ ಗಾರ್ಡ್ ಕೂಗಿದ್ದಕ್ಕೆ ಬೆದರಿ, ಬೈಕ್ ಮತ್ತು ಬ್ಯಾಟರಿಯನ್ನು ಅಲ್ಲಿಯೇ ಬಿಟ್ಟು ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಶಿವಮೊಗ್ಗದ ಆಲ್ಕೊಳ ಸಮೀಪದ ಲಗಾನ್ ಕಲ್ಯಾಣ ಮಂಟದ ಮುಂಭಾಗ ಘಟನೆ ನಡೆದಿದೆ.
ಆನಂದ್ ಎಂಬುವವರಿಗೆ ಸೇರಿ ಲಾರಿಯನ್ನು ಲಗಾನ್ ಕಲ್ಯಾಣ ಮಂಟಪದ ಮುಂಭಾಗ ಖಾಲಿ ಜಾಗದಲ್ಲಿ ನಿಲ್ಲಿಸಿದ್ದರು. ಬೈಕ್ನಲ್ಲಿ ಬಂದ ಇಬ್ಬರು ಲಾರಿಯ ಬ್ಯಾಟರಿ ಬಿಚ್ಚಿ ಕಳ್ಳತನ ಮಾಡಿಕೊಂಡು ಹೋಗುತ್ತಿದ್ದರು. ಇದನ್ನು ಗಮನಿಸಿ ಸೆಕ್ಯೂರಿಟಿ ಗಾರ್ಡ್ ಜೋರಾಗಿ ಕೂಗಿದಾಗ, ಕಳ್ಳರು ಬ್ಯಾಟರಿ ಮತ್ತು ಅವರು ತಂದಿದ್ದ ಬೈಕ್ ಅನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಆರೋಪಿಗಳು ಆನಂದ್ ಅವರ ಬಳಿ ಕೆಲಸ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
![]() |
ಇದನ್ನೂ ಓದಿ » ಬಂಗಾರಪ್ಪ ಜನ್ಮದಿನ, ಮೂವರಿಗೆ ಬಂಗಾರ ಪ್ರಶಸ್ತಿ, ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200