SHIVAMOGGA LIVE NEWS | 9 APRIL 2023
SHIMOGA : ಚಾಲಕ ಲಾರಿಯನ್ನು (Lorry) ದಿಢೀರ್ ತಿರುಗಿಸಿದ್ದರಿಂದ ಬೈಕ್ ಸವಾರ ಲಾರಿ ಕೆಳಗೆ ಸಿಕ್ಕಿಬಿದ್ದು ಗಾಯಗೊಂಡಿದ್ದಾರೆ. ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಪಿಳ್ಳಂಗೆರೆಯ ಹೊಸಮನೆ ತಾಂಡದ ರಮೇಶ್ ಎಂಬುವವರು ಗಾಯಗೊಂಡಿದ್ದಾರೆ. ಶಿವಮೊಗ್ಗದ ಸಂಗೊಳ್ಳಿ ರಾಯಣ್ಣ ಸರ್ಕಲ್ನಲ್ಲಿ ಘಟನೆ ಸಂಭವಿಸಿದೆ. ರಮೇಶ್ ಅವರು ಕೆಇಬಿ ಸರ್ಕಲ್ ಕಡೆಯಿಂದ ಶಂಕರಮಠ ಸರ್ಕಲ್ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದರು. ಕೆಇಬಿ ಸರ್ಕಲ್ ಕಡೆಯಿಂದ ವೇಗವಾಗಿ ಬಂದ ಲಾರಿ, ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ಫ್ಲೈ ಓವರ್ ಕಡೆಗೆ ತಿರುಗಿದೆ. ಈ ವೇಳೆ ಅಪಘಾತ ಸಂಭವಿಸಿದೆ.
ಇದನ್ನೂ ಓದಿ – ಉಪನ್ಯಾಸಕಿಗೆ ಬಂತು ಫೋನ್ ಕರೆ, 24 ಗಂಟೆಯಲ್ಲಿ ಬ್ಲಾಕ್ ಆಗಲಿದೆ ಎಂದು ಎಚ್ಚರಿಕೆ, ನಂಬಿಸಿ ವಂಚನೆ
ರಮೇಶ್ ಅವರು ಬೈಕ್ ಸಹಿತ ಲಾರಿ ಕೆಳಗೆ ಸಿಲುಕಿದ್ದರು. ಸ್ಥಳೀಯರು ಅವರನ್ನು ರಕ್ಷಿಸಿದ್ದಾರೆ. ಘಟನೆ ಸಂಭವಿಸುತ್ತಿದ್ದಂತೆ ಚಾಲಕ ಲಾರಿ (Lorry) ಬಿಟ್ಟು ಪರಾರಿಯಾಗಿದ್ದಾನೆ. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200