ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 13 ಅಕ್ಟೋಬರ್ 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ನಡುರಸ್ತೆಯಲ್ಲಿ ಬೈಕ್ ನಿಲ್ಲಿಸಿ ಸೀಮೆ ಎಣ್ಣೆ ಸುರಿದುಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆಸ್ತಿ ವ್ಯಾಜ್ಯ ಸಂಬಂಧ ಮನನೊಂದು ಕೃತ್ಯ ಎಸಗಿರುವ ಶಂಕೆ ಇದೆ.
ತೀರ್ಥಹಳ್ಳಿ ತಾಲೂಕು ಅಕ್ಲಾಪುರ ಗ್ರಾಮದ ರಾಘವೇಂದ್ರ (40) ಮೃತ ವ್ಯಕ್ತಿ. ಮನೆಯಿಂದಲೇ ಸೀಮೆ ಎಣ್ಣೆ ತಂದಿದ್ದ ರಾಘವೇಂದ್ರ, ದತ್ತರಾಜಪುರ ಮಾರ್ಗದಲ್ಲಿ ಹೋಗುವಾಗ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ.
ತೀವ್ರ ಸುಟ್ಟಗಾಯಗಳಿಂದಾಗಿ ರಾಘವೇಂದ್ರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದಾರಿಯಲ್ಲಿ ಹೋಗುವವರು ಘಟನೆ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಘಟನೆಗೆ ಕಾರಣವೇನು?
ಆಸ್ತಿವ್ಯಾಜ್ಯ ಸಂಬಂಧ ರಾಘವೇಂದ್ರ ಅವರು ಮನನೊಂದಿದ್ದರು ಎಂದು ತಿಳಿದು ಬಂದಿದೆ. ಇದೆ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ರಾಘವೇಂದ್ರಾಗೆ ಪತ್ನಿ, ಇಬ್ಬರು ಮಕ್ಕಳಿದ್ದಾರೆ.
ಘಟನೆ ಸಂಬಂಧ ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






