ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಅಕ್ಟೋಬರ್ 2021
ಸೇತುವೆ ಮೇಲಿನಿಂದ ತುಂಗಾ ಹೊಳೆಗೆ ಜಿಗಿದು, ನಡು ನೀರಲ್ಲಿ ಸಿಲುಕಿದ್ದ ಯುವಕನೊಬ್ಬನನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಇನ್ನು, ಕಾರ್ಯಾಚರಣೆ ವೀಕ್ಷಿಸಲು ಭಾರಿ ಜನ ಸೇರಿದ್ದರಿಂದ ಸೇತುವೆ ಮೇಲೆ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಯಿತು.
ಶಿವಮೊಗ್ಗ ಲೈವ್.ಕಾಂ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಬೆಕ್ಕಿನಕಲ್ಮಠ ಬಳಿ ಸೇತುವೆ ಮೇಲಿನಿಂದ ಯುವಕನೊಬ್ಬ ತುಂಗಾ ಹೊಳೆಗೆ ಹಾರಿದ್ದಾನೆ. ಆತನನ್ನು ತನ್ವೀರ್ ಎಂದು ಗುರುತಿಸಲಾಗಿದೆ.
ಸೇತುವೆಯಿಂದ ಹಾರಿದನಂತೆ..!
ತನ್ವೀರ್, ಹೊಸ ಸೇತುವೆ ಮೇಲಿಂದ ತುಂಗಾ ಹೊಳೆಗೆ ಹಾರಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಹೊಳೆಯಲ್ಲಿ ನೀರು ರಭಸವಾಗಿ ಹರಿಯುತ್ತಿದ್ದರಿಂದ ರೈಲ್ವೆ ಸೇತುವೆ ದಾಟಿ ಪಕ್ಕದ ಗಿಡಗಂಟಿಯ ನಡುವೆ ಸಿಲುಕಿದ್ದ. ನೆರವಿಗಾಗಿ ಕೈ ಬೀಸಿ ಕರೆಯುತ್ತಿದ್ದ.
VIDEO REPORT
ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ
ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದರು. ಕಾರ್ಯಾಚರಣೆ ನಡೆಸಿ ತನ್ವೀರ್’ನ ರಕ್ಷಣೆ ಮಾಡಿ, ದಡಕ್ಕೆ ಕರೆತಂದರು. ಸೇತುವೆಯಿಂದ ಜಿಗಿದಿದ್ದರೂ ಅದೃಷ್ಟವಶಾತ್ ತನ್ವೀರ್’ಗೆ ಯಾವುದೆ ತೊಂದರೆಯಾಗಿಲ್ಲ.
‘ಕಾಲು ಜಾರಿ ಬಿದ್ದೆ’
ರಕ್ಷಣಾ ಕಾರ್ಯಾಚಾರಣೆ ಬಳಿಕ ತಾನು ಕಾಲು ಜಾರಿ ಸೇತುವೆಯಿಂದ ಬಿದ್ದಿದ್ದಾಗಿ ತನ್ವೀರ್ ಹೇಳಿಕೊಂಡಿದ್ದಾನೆ. ಆದರೆ ಸೇತುವೆ ತಡೆಗೋಡೆ ಎತ್ತರವಾಗಿದ್ದು, ಜಾರಿ ಹೊಳೆಗೆ ಬೀಳು ಸಾಧ್ಯವಿಲ್ಲ.
ರಕ್ಷಣಾ ಕಾರ್ಯಾಚರಣೆ ವೀಕ್ಷಿಸಲು ಸೇತುವೆ ಮೇಲೆ ಭಾರಿ ಜನ ಸೇರಿದ್ದರು. ಇದರಿಂದಾಗಿ ಸೇತವೆ ಮೇಲೆ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸಂಚಾರ ದಟ್ಟಣೆ ನಿಯಂತ್ರಿಸಿದರು. ಕೋಟೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200