ಶಿವಮೊಗ್ಗದ ತುಂಗಾ ಹಳೆ ಸೇತುವೆಯಿಂದ ಜಿಗಿದ ವ್ಯಕ್ತಿ, ಟ್ರಾಫಿಕ್ ಎಎಸ್ಐ ಸಮಯ ಪ್ರಜ್ಞೆಯಿಂದ ಉಳಿಯಿತು ಜೀವ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಜನವರಿ 2022

ತುಂಗಾ ಸೇತುವೆಯಿಂದ ಹೊಳಗೆ ಜಿಗಿದು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಸಮೀಪದಲ್ಲಿ ಇದ್ದ ಟ್ರಾಫಿಕ್ ಎಎಸ್ಐ ಒಬ್ಬರ ಸಮಯ ಪ್ರಜ್ಞೆಯಿಂದಾಗಿ, ವ್ಯಕ್ತಿಯನ್ನು ರಕ್ಷಣೆ ಮಾಡಲಾಗಿದೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

AVvXsEichXaELYeDOhFU0n9XstiInpkhsI4y9y5uB VImqATyx1h3CLRA4zsRrFRxoiVo U462f0MYCBVD

ಮಂಜುನಾಥ ಎಂಬಾತ ಗುರುವಾರ ರಾತ್ರಿ ತುಂಗಾ ನದಿಯ ಹಳೆ ಸೇತುವೆ ಮೇಲಿಂದ ಜಿಗಿದಿದ್ದಾನೆ. ಈತನು ಹೊಳೆಹೊನ್ನೂರು ಬಳಿಯ ಅರಹತೊಳಲು ಕೈಮರದವನು ಎಂದು ಹೇಳಲಾಗುತ್ತಿದೆ. ಸೇತುವೆ ಮೇಲಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಲು ಕಾರಣವೇನು ಎಂದು ತಿಳಿದು ಬಂದಿಲ್ಲ.

ಸೊಂಟಕ್ಕೆ ಗಂಭೀರ ಪೆಟ್ಟು

ಹೊಳೆಯಲ್ಲಿ ನೀರಿನ ಹರಿವು ಕಡಿಮೆ ಇದೆ. ಹಾಗಾಗಿ ಮಂಜುನಾಥ ಹೊಳೆಗೆ ಜಿಗಿಯುತ್ತಿದ್ದಂತೆ ಬಂಡೆಗಳು ಅಪ್ಪಳಿಸಿವೆ. ಇದರಿಂದ ಆತನ ಸೊಂಟದ ಭಾಗಕ್ಕೆ ಗಂಭೀರ ಪೆಟ್ಟು ಬಿದ್ದಿದೆ ಎಂದು ತಿಳಿದು ಬಂದಿದೆ. ಮಂಜನಾಥನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಎಎಸ್ಐ ಕರ್ತವ್ಯ ಪ್ರಜ್ಞೆ

ಇನ್ನು, ಮಂಜುನಾಥ ಸೇತುವೆಯಿಂದ ಜಿಗಿಯುತ್ತಿದ್ದಂತೆ ಟ್ರಾಫಿಕ್ ಠಾಣೆ ಎಎಸ್ಐ ಶ್ರೀನಿವಾಸ್ ರಕ್ಷಣೆಗೆ ಧಾವಿಸಿದ್ದಾರೆ. ಎಎಸ್ಐ ಶ್ರೀನಿವಾಸ್ ಅವರು ಸೇತುವೆ ಬಳಿ ನಿಂತಿದ್ದರು. ಆಗ ಮಂಜುನಾಥ ಹೊಳೆಗೆ ಜಿಗಿದಿದ್ದಾನೆ. ಕೂಡಲೆ ಶ್ರೀನಿವಾಸ್ ಅವರು ಆಟೋ ಚಾಲಕರಾದ ಅರ್ಜುನ್ ಮತ್ತು ಕಾಂತ ಅವರನ್ನು ಕರೆದುಕೊಂಡು ಸೇತುವೆಯ ಕೆಳಗಿಳಿದು ಮಂಜುನಾಥನ ರಕ್ಷಣೆ ಮಾಡಿದ್ದಾರೆ.

ಆಟೋದಲ್ಲೇ ಮಂಜುನಾಥನನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ದಾಖಲು ಮಾಡಲಾಗಿದೆ. ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ABOUT NEW DEC 2021 REPORT

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 21, 2022

Leave a Comment