ಶಿವಮೊಗ್ಗ : ಲಾಡ್ಜ್ ಕೊಠಡಿಯಲ್ಲಿ (Room) ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಶುಕ್ರವಾರ ಕೊಠಡಿ ಬಾಡಿಗೆಗೆ ಪಡೆದಿದ್ದ ಹುಬ್ಬಳ್ಳಿ ಮೂಲದ ವ್ಯಕ್ತಿ ಬಾಗಿಲು ತೆರೆದಿರಲಿಲ್ಲ. ಈ ಹಿನ್ನೆಲೆ ಇವತ್ತು ಬೆಳಗ್ಗೆ ಲಾಡ್ಜ್ ಸಿಬ್ಬಂದಿ ಪರಶೀಲಿಸಿದಾಗ ಮೃತದೇಹ ಪತ್ತೆಯಾಗಿದೆ.
ಹುಬ್ಬಳ್ಳಿ ಮೂಲದ ಬಸವರಾಜ್ ಬಾಗಲಕೋಟೆ (46) ಎಂಬುವವರು ಬಿ.ಹೆಚ್.ರಸ್ತೆಯ ದುರ್ಗಾ ಲಾಡ್ಜ್ನಲ್ಲಿ ಕೊಠಡಿ (Room) ಬಾಡಿಗೆಗೆ ಪಡೆದಿದ್ದರು.
ಬಾತ್ರೂಮ್ನಲ್ಲಿ ಸಿಕ್ತು ಮೃತದೇಹ
ಬಸವರಾಜ್ ಬಾಗಲಕೋಟೆ ಬಾಗಿಲು ತೆರೆಯದ ಹಿನ್ನೆಲೆ ಇವತ್ತು ಬೆಳಗ್ಗೆ ಲಾಡ್ಜ್ ಸಿಬ್ಬಂದಿ ಪರಿಶೀಲನೆ ನಡೆಸಿದರು. ಬಾಗಿಲು ತೆರೆದು ಕೊಠಡಿಯ ಒಳಗೆ ಶೋಧಿಸಿದರು. ಬಾತ್ರೂಮ್ನಲ್ಲಿ ಬಸವರಾಜ್ ಬಾಗಲಕೋಟೆ ಅಂಗಾತವಾಗಿ ಬಿದ್ದಿದ್ದರು ಎಂದು ಆರೋಪಿಸಲಾಗಿದೆ. ಕೂಡಲೆ ಲಾಡ್ಜ್ ಸಿಬ್ಬಂದಿ ದೊಡ್ಡಪೇಟೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು.
ಇದನ್ನೂ ಓದಿ » ಹಜ್ ಯಾತ್ರೆ, ಇದೇ ಮೊದಲು ಶಿವಮೊಗ್ಗದಲ್ಲಿ ನಾಲ್ಕು ಜಿಲ್ಲೆಯ ಯಾತ್ರಾರ್ಥಿಗಳಿಗೆ ಶಿಬಿರ, ಏನಿದು ಶಿಬಿರ? ಏನೇನಿರುತ್ತೆ?
ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಬಸವರಾಜ್ ಬಾಗಲಕೋಟೆ ಶಿವಮೊಗ್ಗದ ಆಟೋಮೊಬೈಲ್ನಲ್ಲಿ ಎಕ್ಸಿಕ್ಯೂಟಿವ್ ಆಗಿದ್ದರು ಎಂದು ಹೇಳಲಾಗುತ್ತಿದೆ. ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200