SHIVAMOGGA LIVE | 28 JUNE 2023
ANANDAPURA : ಇಬ್ಬರು ಹೆಣ್ಮಕ್ಕಳ ಮದುವೆಗೆ (Marriage) ಅಂತಿಮ ಸಿದ್ಧತೆ ನಡೆಸುತ್ತಿದ್ದ ವ್ಯಕ್ತಿಯೊಬ್ಬರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮದುವೆ ಹಿಂದಿನ ದಿನ ಘಟನೆ ಸಂಭವಿಸಿದ್ದು, ಸಂಭ್ರಮದಲ್ಲಿರಬೇಕಾದ ಮನೆಯಲ್ಲಿ ಸೂತಕ ಆವರಿಸಿದೆ.
ಬನವಾಸಿ ನಿವಾಸಿ ಮಂಜುನಾಥ ಗೌಡ (58) ಮೃತ ದುರ್ದೈವಿ. ಆನಂದಪುರ ಸಮೀಪದ ಆಚಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚನ್ನಕೊಪ್ಪ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ನಡೆದು ಹೋಗುತ್ತಿದ್ದಾಗ ಮಂಜುನಾಥ ಗೌಡ ಅವರಿಗೆ ಕಾರು ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ಅವರು ಅಸುನೀಗಿದ್ದಾರೆ.
ಹೆಣ್ಮಕ್ಕಳ ಮದುವೆಗೆ ಅಂತಿಮ ಸಿದ್ಧತೆ
ಮಂಜುನಾಥ ಗೌಡ ಅವರಿಗೆ ಇಬ್ಬರು ಹೆಣ್ಣು ಮಕ್ಕಳು. ಇಬ್ಬರ ಮದುವೆಯು (Marriage) ಇಂದು ನಿಗದಿಯಾಗಿತ್ತು. ಈ ಹಿನ್ನೆಲೆ ಮದುವೆ ಕಾರ್ಯದ ಅಂತಿಮ ಸಿದ್ಧತೆ ನಡೆಸುತ್ತಿದ್ದರು. ಕಾರ್ಯಕ್ರಮಕ್ಕೆ ಬೇಕಾದ ಸಾಮಗ್ರಿ ಖರೀದಿಸಲು ಅವರು ಮಂಗಳವಾರ ಆನಂದಪುರಂಗೆ ತೆರಳಿದ್ದರು. ಅಲ್ಲಿಂದ ಮನೆಗೆ ಮರಳುವಾಗ ದುರ್ಘಟನೆ ಸಂಭವಿಸಿದೆ.
ಅಪಘಾತದಲ್ಲೇ ಮಡಿದಿದ್ದರು ಪತ್ನಿ
ಮಂಜುನಾಥ ಗೌಡ ಅವರ ಪತ್ನಿ ಕೂಡ ಇದೆ ರೀತಿ ದುರ್ಘಟನೆಯಲ್ಲಿ ಮೃತಪಟ್ಟಿದ್ದರು ಎಂದು ತಿಳಿದು ಬಂದುದೆ. ಮೂರು ವರ್ಷದ ಹಿಂದೆ ಬನವಾಸಿಯಲ್ಲಿ ಸಂಭವಿಸಿದ ಟ್ರ್ಯಾಕ್ಟರ್ ಅಪಘಾತದಲ್ಲಿ ಪತ್ನಿ ಮೃತಪಟ್ಟಿದ್ದರು. ಈಗ ಮಂಜುನಾಥ ಗೌಡ ಅವರ ಮೃತರಾಗಿದ್ದು, ಮಕ್ಕಳು ತಂದೆ – ತಾಯಿ ಇಬ್ಬರು ಕಳೆದುಕೊಂಡು ದುಃಖದಲ್ಲಿದ್ದಾರೆ.
ಇದನ್ನೂ ಓದಿ – ಲಂಚದ ಹಣ ಪಡೆಯುತ್ತಿದ್ದಾಗ ಮಹಿಳಾ ಅಧಿಕಾರಿ ಎದುರಿಗೆ ಲೋಕಾಯುಕ್ತ ಪೊಲೀಸರು ಪ್ರತ್ಯಕ್ಷ
ನಿಗದಿಯಂತೆ ಮದುವೆ ಕಾರ್ಯ
ಘಟನೆ ಹಿನ್ನೆಲೆ ಮದುವೆ ಕಾರ್ಯ ನಡೆಸಬೇಕೋ, ಮುಂದೂಡಬೇಕೋ ಎಂಬ ಗೊಂದಲ ಮೂಡಿತ್ತು. ಕೊನೆಗೆ ಹಿರಿಯರ ಸಮಕ್ಷಮದಲ್ಲಿ ಮದುವೆ ಕಾರ್ಯ ಮುಂದುವರೆಸಲು ನಿರ್ಧರಿಸಲಾಯಿತು. ಅದರಂತೆ ಇಂದು ಮಂಜುನಾಥ ಗೌಡ ಅವರ ಇಬ್ಬರು ಹೆಣ್ಣು ಮಕ್ಕಳ ಮದುವೆ ನಡೆಯಲಿದೆ.
ಇದನ್ನೂ ಓದಿ – ಭದ್ರಾವತಿಯ ಯುವಕನಿಗೆ 3 ವರ್ಷ ಜೈಲು, 2.88 ಲಕ್ಷ ರೂ. ದಂಡ, ಕಾರಣವೇನು?
ಮಂಜುನಾಥ ಗೌಡ ಅವರ ಮರಣೋತ್ತರ ಪರೀಕ್ಷೆ ಬಳಿಕ ಬನವಾಸಿಯಲ್ಲಿ ಅವರ ಅಂತ್ಯ ಸಂಸ್ಕಾರ ನೆರವೇರಿಸಲಾಗುತ್ತದೆ. ಆನಂದಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200