SHIVAMOGGA LIVE NEWS | 21 NOVEMBER 2022
THIRTHAHALLI | ಮಂಗಳೂರಿನ ಆಟೋದಲ್ಲಿ ಕುಕ್ಕರ್ (Mangaluru Blast) ಸ್ಪೋಟ ಪ್ರಕರಣದ ಹಿನ್ನೆಲೆ ತೀರ್ಥಹಳ್ಳಿಯ ವಿವಿಧೆಡೆ ಪೊಲೀಸರು ಪರಿಶೀಲನೆ ನಡೆಸಿದರು. ಹಲವರ ವಿಚಾರಣೆ ಮಾಡಿದರು.
ತೀರ್ಥಹಳ್ಳಿ ಪೊಲೀಸರು ಇಂದು ಬೆಳಗ್ಗೆಯಿಂದ ವಿವಿಧೆಡೆ ಪರಿಶೀಲನೆ ನಡೆಸಿದರು. 15ಕ್ಕೂ ಹೆಚ್ಚು ಜನರ ವಿಚಾರಣೆ ನಡೆಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
(Mangaluru Blast)
ವಿವಿಧೆಡೆ ಪರಿಶೀಲನೆ ನಡೆಸಿದ ಪೊಲೀಸ್
ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟದ ಪ್ರಕರಣದ ಹಿನ್ನೆಲೆ ತೀರ್ಥಹಳ್ಳಿಯಲ್ಲಿರುವ ಶಂಕಿತ ಶಾರೀಕ್, ಮಾಜ್ ಮನೆಗಳಲ್ಲಿ ಪೊಲೀಸರು ಪರಿಶೀಲನೆ ನಡೆಸಿದರು. ಬಾಳೆಬೈಲು, ಸೊಪ್ಪುಗುಡ್ಡೆಯ 3 ಮನೆಗಳಲ್ಲಿ ತಪಾಸಣೆ ನಡೆಸಿದರು. ಇದೇ ಸಂದರ್ಭ 15ಕ್ಕೂ ಹೆಚ್ಚು ಜನರ ವಿಚಾರಣೆ ನಡೆಸಿ, ಹೇಳಿಕೆ ಪಡೆಯಲಾಗಿದೆ.
ತೀರ್ಥಹಳ್ಳಿ ಠಾಣೆ ಇನ್ಸ್ ಪೆಕ್ಟರ್ ಅಶ್ವಥಗೌಡ, ಮಾಳೂರು ಠಾಣೆ ಇನ್ಸ್ ಪೆಕ್ಟರ್ ಪ್ರವೀಣ್ ನೀಲಮ್ಮನವರ್ ಅವರ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಯಿತು.
(Mangaluru Blast)
ಶಾರೀಕ್ ಕುಟುಂಬ ಮಂಗಳೂರಿಗೆ
ಕುಕ್ಕರ್ ಸ್ಪೋಟ ಪ್ರಕರಣದಲ್ಲಿ ಶಂಕಿತ ಶಾರೀಕ್ ಗಾಯಗೊಂಡಿರುವ ಅನುಮಾನ ವ್ಯಕ್ತವಾಗಿತ್ತು. ಗುರುತು ಪತ್ತೆಗಾಗಿ ಶಾರೀಕ್ ಕುಟುಂಬಕ್ಕೆ ಪೊಲೀಸರು ಬುಲಾವ್ ನೀಡಿದ್ದರು. ಆದ್ದರಿಂದ ಶಾರೀಕ್ ಕುಟುಂಬದವರು ಮಂಗಳೂರಿಗೆ ತೆರಳಿದ್ದಾರೆ. ಶಾರೀಕ್ ತಾಯಿ, ಸಹೋದರಿಯರು ಮಂಗಳೂರಿನಲ್ಲಿದ್ದಾರೆ.
ತೀರ್ಥಹಳ್ಳಿಯಲ್ಲಿ ಮತ್ತೆ ಮಡುಗಟ್ಟಿದ ಆತಂಕ
ಮಂಗಳೂರು ಕುಕ್ಕರ್ ಸ್ಪೋಟ ಪ್ರಕರಣದಲ್ಲಿ ತೀರ್ಥಹಳ್ಳಿಯ ಯುವಕ ಶಾರೀಕ್ ಕೈವಾಡದ ಕುರಿತು ಮಾಹಿತಿ ಲಭಿಸುತ್ತಿದ್ದಂತೆ ತಾಲೂಕಿನಲ್ಲಿ ಆತಂಕ ಸೃಷ್ಟಿಯಾಗಿದೆ. ಈ ಹಿಂದೆ ಶಾರೀಕ್ ಸಹಚರ ತೀರ್ಥಹಳ್ಳಿಯ ಮಾಜ್ ಮುನೀರ್ ಎಂಬಾತನನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದರು. ಇದು ತೀರ್ಥಹಳ್ಳಿ ಪಟ್ಟಣದ ಜನರಲ್ಲಿ ಭಯ ಹುಟ್ಟಿಸಿತ್ತು.
ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗ ನಗರದ 3 ಕ್ರೈಮ್ ನ್ಯೂಸ್ ಅಪ್ ಡೇಟ್ | SHIMOGA CRIME NEWS
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.