ಶಿವಮೊಗ್ಗದ ಲೈವ್.ಕಾಂ | BHADRAVATHI NEWS | 11 ಜನವರಿ 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಯನ್ನು ಹೊಟೇಲ್ ಸಪ್ಲಯರ್ ಒಬ್ಬಾತ, ಕರೆದೊಯ್ದು ಲಾಡ್ಜ್ ಒಂದರಲ್ಲಿ ಅತ್ಯಾಚಾರವೆಸಗಿದ್ದಾನೆ. ಈ ವಿಚಾರವನ್ನು ಹೊರಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾನೆ.
ಉಮೇಶ್ (28), ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಆರೋಪಿ. ಭದ್ರಾವತಿ ಪಟ್ಟಣ ಸಮೀಪದ ಗ್ರಾಮವೊಂದರ ಹೊಟೇಲ್’ನ ಸಪ್ಲಯರ್ ಆಗಿ ಕೆಲಸ ಮಾಡುತ್ತಿದ್ದ.
ಪ್ರಕರಣ ಹಿನ್ನೆಲೆ
ಉಮೇಶ ಕೆಲಸ ಮಾಡುತ್ತಿದ್ದ ಹೊಟೇಲ್’ನಲ್ಲಿ ಮಹಿಳೆಯೊಬ್ಬರು ಕೆಲಸ ಮಾಡುತ್ತಿದ್ದರು. ಆ ಮಹಿಳೆಯ ಮಗಳು ಆಗಾಗ ಹೊಟೇಲ್’ಗೆ ಬಂದು ಹೋಗುತ್ತಿದ್ದಳು. ಆಕೆಯನ್ನು ಪರಿಚಯಿಸಿಕೊಂಡ ಉಮೇಶ್, ಕೃತ್ಯವೆಸಗಿದ್ದಾನೆ.
ಸೋಮವಾರ ಬೆಳಗ್ಗೆ ಅಪ್ರಾಪ್ತೆಯು ಶಾಲೆಗೆ ತೆರಳುತ್ತಿದ್ದಳು. ಈ ಸಂದರ್ಭ ಉಮೇಶ, ಆಕೆಯನ್ನು ಪುಸಲಾಯಿಸಿ, ಭದ್ರಾವತಿಯಿಂದ ಬಸ್ಸಿನಲ್ಲಿ ತರೀಕೆರೆಗೆ ಕರೆದೊಯ್ದಿದ್ದಾನೆ. ಅಲ್ಲಿ ಲಾಡ್ಜ್ ಒಂದರಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಅಲ್ಲದೆ ಈ ವಿಚಾರ ಹೊರಗೆ ಗೊತ್ತಾದರೆ ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾನೆ ಎಂದು ಆರೋಪಿಸಲಾಗಿದೆ.
ಘಟನೆ ಸಂಬಂಧ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






