ಕಾಣೆಯಾಗಿದ್ದ ಕಾಲೇಜು ಪ್ರೊಫಸರ್ ಸಾವು, ಕೆರೆಯಲ್ಲಿ ಪತ್ತೆಯಾಯ್ತು ಮೃತದೇಹ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಅಕ್ಟೋಬರ್ 2021

ಹೊನ್ನಾಳಿ ತಾಲೂಕಿನ ಕೆರೆಯೊಂದರಲ್ಲಿ ನವುಲೆಯ ಕೃಷಿ ಕಾಲೇಜಿನ ಪ್ರೊಫೆಸರ್ ಒಬ್ಬರ ಮೃತದೇಹ ಪತ್ತೆಯಾಗಿದೆ. ಇತ್ತ ಪ್ರೊಫೆಸರ್ ಕಾಣೆಯಾಗಿರುವ ಕುರಿತು ಶಿವಮೊಗ್ಗದ ಪೊಲೀಸ್ ಠಾಣೆಯೊಂದರಲ್ಲಿ ಪ್ರಕರಣ ದಾಖಲಾಗಿತ್ತು.

ಕೃಷಿ ಕಾಲೇಜು ಪ್ರೊಫಸೆರ್ ಗಂಗಾಪ್ರಸಾದ್ (57) ಮೃತರು. ಹೊನ್ನಾಳಿ ತಾಲೂಕು ಚಿಕ್ಕಬಾಸೂರು ಗ್ರಾಮದ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ.

ಕೆರೆ ಏರಿ ಮೇಲೆ ಪ್ಯಾಂಟು, ಚಪ್ಪಲಿ

ಕೆರೆಯಲ್ಲಿ ಮೃತದೇಹ ತೇಲುತ್ತಿರುವ ಸಂಬಂಧ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ದಡಕ್ಕೆ ತಂದು ಗುರುತು ಪತ್ತೆಗೆ ಕ್ರಮ ಕೈಗೊಂಡಿದ್ದರು. ಮೃತ ವ್ಯಕ್ತಿಗೆ ಸೇರಿದ ಪ್ಯಾಂಟು, ಚಪ್ಪಲಿಗಳು ಕೆರೆ ಏರಿ ಮೇಲೆ ಪತ್ತೆಯಾಗಿದ್ದವು. ಇದರಲ್ಲಿದ್ದ ಕೆಲವು ದಾಖಲೆಗಳ ಆಧಾರದಲ್ಲಿ ಅವರನ್ನು ಪ್ರೊ. ಗಂಗಾಪ್ರಸಾದ್ ಎಂದು ಗುರುತಿಸಲಾಗಿದೆ.

NH nephrolody%2Bad %2Bkannada 10

ನಾಪತ್ತೆ ಪ್ರಕರಣ ದಾಖಲಾಗಿತ್ತು

ಪ್ರೊ.ಗಂಗಾಪ್ರಸಾದ್ ಅವರು ಕಾಣೆಯಾಗಿರುವ ಕುರಿತು ಅವರ ಪತ್ನಿ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಅ.18ರಂದು ಪ್ರೊ.ಗಂಗಾಪ್ರಸಾದ್ ಅವರು ತಮ್ಮ ಕಾರಿನಲ್ಲಿ ಕಾಲೇಜಿಗೆ ತೆರಳುವುದಾಗಿ ತಿಳಿಸಿ ಹೋಗಿದ್ದರು. ಆ ಬಳಿಕ ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಅವರು ಕಾಲೇಜಿಗೂ ಕೂಡ ಹೋಗಿರಲಿಲ್ಲ. ಇದರಿಂದ ಅನುಮಾನಗೊಂಡ ಅವರ ಕುಟುಂಬದವರು ಎಲ್ಲೆಡೆ ಕರೆ ಮಾಡಿ ವಿಚಾರಿಸಿದ್ದಾರೆ. ಎಲ್ಲಿಯೂ ಪತ್ತೆಯಾಗದ ಹಿನ್ನೆಲೆ ದೂರು ನೀಡಿದ್ದರು.

1632381444428179 2

ಕೆಲ ಘಟನೆಗಳಿಂದ ಮನನೊಂದಿದ್ದರು

ಕಾಲೇಜಿನಲ್ಲಿ ಈ ಹಿಂದೆ ನಡೆದ ಒಂದು ವಿಚಾರವಾಗಿ ಪ್ರೊ.ಗಂಗಾಪ್ರಸಾದ್ ಅವರು ಮನನೊಂದಿದ್ದರು ಎಂದು ಅವರ ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ. ಇದೆ ಕಾರಣಕ್ಕೆ ಅವರು ಬೇಸರಗೊಂಡು ಎಲ್ಲಿಯಾದರೂ ಹೋಗಿರಬಹುದು ಎಂದು ಶಂಕಿಸಿದ್ದರು. ಇವತ್ತು ಪ್ರೊ.ಗಂಗಾಪ್ರಸಾದ್ ಅವರ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

SHIVAMOGGA LIVE CONTATCT

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 19, 2021

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment