ಕಾಣೆಯಾಗಿದ್ದ ಕಾಲೇಜು ಪ್ರೊಫಸರ್ ಸಾವು, ಕೆರೆಯಲ್ಲಿ ಪತ್ತೆಯಾಯ್ತು ಮೃತದೇಹ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಅಕ್ಟೋಬರ್ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಹೊನ್ನಾಳಿ ತಾಲೂಕಿನ ಕೆರೆಯೊಂದರಲ್ಲಿ ನವುಲೆಯ ಕೃಷಿ ಕಾಲೇಜಿನ ಪ್ರೊಫೆಸರ್ ಒಬ್ಬರ ಮೃತದೇಹ ಪತ್ತೆಯಾಗಿದೆ. ಇತ್ತ ಪ್ರೊಫೆಸರ್ ಕಾಣೆಯಾಗಿರುವ ಕುರಿತು ಶಿವಮೊಗ್ಗದ ಪೊಲೀಸ್ ಠಾಣೆಯೊಂದರಲ್ಲಿ ಪ್ರಕರಣ ದಾಖಲಾಗಿತ್ತು.

ಕೃಷಿ ಕಾಲೇಜು ಪ್ರೊಫಸೆರ್ ಗಂಗಾಪ್ರಸಾದ್ (57) ಮೃತರು. ಹೊನ್ನಾಳಿ ತಾಲೂಕು ಚಿಕ್ಕಬಾಸೂರು ಗ್ರಾಮದ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ.

ಕೆರೆ ಏರಿ ಮೇಲೆ ಪ್ಯಾಂಟು, ಚಪ್ಪಲಿ

ಕೆರೆಯಲ್ಲಿ ಮೃತದೇಹ ತೇಲುತ್ತಿರುವ ಸಂಬಂಧ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ದಡಕ್ಕೆ ತಂದು ಗುರುತು ಪತ್ತೆಗೆ ಕ್ರಮ ಕೈಗೊಂಡಿದ್ದರು. ಮೃತ ವ್ಯಕ್ತಿಗೆ ಸೇರಿದ ಪ್ಯಾಂಟು, ಚಪ್ಪಲಿಗಳು ಕೆರೆ ಏರಿ ಮೇಲೆ ಪತ್ತೆಯಾಗಿದ್ದವು. ಇದರಲ್ಲಿದ್ದ ಕೆಲವು ದಾಖಲೆಗಳ ಆಧಾರದಲ್ಲಿ ಅವರನ್ನು ಪ್ರೊ. ಗಂಗಾಪ್ರಸಾದ್ ಎಂದು ಗುರುತಿಸಲಾಗಿದೆ.

NH nephrolody%2Bad %2Bkannada 10

ನಾಪತ್ತೆ ಪ್ರಕರಣ ದಾಖಲಾಗಿತ್ತು

ಪ್ರೊ.ಗಂಗಾಪ್ರಸಾದ್ ಅವರು ಕಾಣೆಯಾಗಿರುವ ಕುರಿತು ಅವರ ಪತ್ನಿ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಅ.18ರಂದು ಪ್ರೊ.ಗಂಗಾಪ್ರಸಾದ್ ಅವರು ತಮ್ಮ ಕಾರಿನಲ್ಲಿ ಕಾಲೇಜಿಗೆ ತೆರಳುವುದಾಗಿ ತಿಳಿಸಿ ಹೋಗಿದ್ದರು. ಆ ಬಳಿಕ ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಅವರು ಕಾಲೇಜಿಗೂ ಕೂಡ ಹೋಗಿರಲಿಲ್ಲ. ಇದರಿಂದ ಅನುಮಾನಗೊಂಡ ಅವರ ಕುಟುಂಬದವರು ಎಲ್ಲೆಡೆ ಕರೆ ಮಾಡಿ ವಿಚಾರಿಸಿದ್ದಾರೆ. ಎಲ್ಲಿಯೂ ಪತ್ತೆಯಾಗದ ಹಿನ್ನೆಲೆ ದೂರು ನೀಡಿದ್ದರು.

1632381444428179 2

ಕೆಲ ಘಟನೆಗಳಿಂದ ಮನನೊಂದಿದ್ದರು

ಕಾಲೇಜಿನಲ್ಲಿ ಈ ಹಿಂದೆ ನಡೆದ ಒಂದು ವಿಚಾರವಾಗಿ ಪ್ರೊ.ಗಂಗಾಪ್ರಸಾದ್ ಅವರು ಮನನೊಂದಿದ್ದರು ಎಂದು ಅವರ ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ. ಇದೆ ಕಾರಣಕ್ಕೆ ಅವರು ಬೇಸರಗೊಂಡು ಎಲ್ಲಿಯಾದರೂ ಹೋಗಿರಬಹುದು ಎಂದು ಶಂಕಿಸಿದ್ದರು. ಇವತ್ತು ಪ್ರೊ.ಗಂಗಾಪ್ರಸಾದ್ ಅವರ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

SHIVAMOGGA LIVE CONTATCT

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment