ಶಿವಮೊಗ್ಗದ ವಿದ್ಯಾರ್ಥಿನಿ ಇನ್‌ಸ್ಟಾಗ್ರಾಂ ಖಾತೆಗೆ ಬಂತು ಎರಡು ಫ್ರೆಂಡ್‌ ರಿಕ್ವೆಸ್ಟ್‌, ಪರಿಶೀಲಿಸಿದಾಗ ಕಾದಿತ್ತು ಶಾಕ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 10 JULY 2023

SHIMOGA : ಇನ್‌ಸ್ಟಾಗ್ರಾಂನಲ್ಲಿ (Instagram) ವಿದ್ಯಾರ್ಥಿನಿಯೊಬ್ಬಳ ಹೆಸರು ಹೋಲುವಂತೆ ಖಾತೆ ಸೃಷ್ಟಿಸಿ, ಆಕೆಯ ಫೋಟೊಗಳನ್ನು ಅಪ್‌ಲೋಡ್‌ ಮಾಡಲಾಗಿದೆ. ಈ ಮೂಲಕ ಮಾನಸಿಕ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿನಿ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾಳೆ.

ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿನಿಯೊಬ್ಬಳ (ಹೆಸರು ಗೌಪ್ಯ) ಇನ್‌ಸ್ಟಾಗ್ರಾಂ ಖಾತೆಗೆ ಆರು ತಿಂಗಳ ಹಿಂದೆ ಆಕೆಯದ್ದೆ ಹೆಸರಿನ ಎರಡು ಪ್ರತ್ಯೇಕ ಇನ್‌ಸ್ಟಾಗ್ರಾಂ (Instagram) ಖಾತೆಗಳಿಂದ ಫ್ರೆಂಡ್‌ ರಿಕ್ವೆಸ್ಟ್‌ ಬಂದಿತ್ತು. ರಿಕ್ವೆಸ್ಟ್‌ ಅಕ್ಸೆಪ್ಟ್‌ ಮಾಡುವ ಬದಲು ಖಾತೆಯನ್ನು ಪರಿಶೀಲಿಸಿದಾಗ ವಿದ್ಯಾರ್ಥಿನಿಯ ಫೋಟೊಗಳನ್ನು ಅಪ್‌ಲೋಡ್‌ ಮಾಡಲಾಗಿತ್ತು. ಸಂಬಂಧಿಕರು ಯಾರೋ ತಮಾಷೆಗಾಗಿ ಈ ರೀತಿ ಮಾಡುತ್ತಿರಬಹುದು ಎಂದು ಪರಿಶೀಲನೆ ನಡೆಸಿದಾಗ ಯಾರೂ ಇನ್‌ಸ್ಟಾಗ್ರಾಂ ಖಾತೆ ತೆಗೆದಿಲ್ಲ ಅನ್ನುವುದು ಖಚಿತವಾಗಿದೆ.

ತನ್ನ ಹೆಸರು ಮತ್ತು ಅನುಮತಿ ಇಲ್ಲದೆ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡಿ, ಮಾನಸಿಕ ಕಿರಿಕುಳ ನೀಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿನಿ ದೂರು ನೀಡಿದ್ದಾರೆ. ಸಿಇಎನ್‌ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

SMS-Fraud-Shimoga-CEN-Police-Station.

ಅನುಮತಿ ಇಲ್ಲದೆ ಫೋಟೊ ಬಳಸುವಂತಿಲ್ಲ

ಸಾಮಾಜಿಕ ಜಾಲತಾಣದಲ್ಲಿ ಅನುಮತಿ ಇಲ್ಲದೆ ಯಾರೆಂದರ ಅವರ ಫೋಟೊಗಳನ್ನು ಬಳಸುವಂತಿಲ್ಲ. ಅನುಮತಿ ಇಲ್ಲದೆ ಫೋಟೊಗಳನ್ನು ಉಪಯೋಗಿಸುವುದು ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿ ಅಪರಾಧವಾಗಲಿದೆ. ಇನ್ನು, ನಕಲಿ ಖಾತೆಗಳನ್ನು ಸೃಷ್ಟಿಸುವುದು ಕೂಡ ಶಿಕ್ಷಾರ್ಹವಾಗಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್‌ 66ರ ಅಡಿಯಲ್ಲಿ ಪ್ರಕರಣ ದಾಖಲಿಸಬಹುದಾಗಿದೆ. ಆರೋಪ ಸಾಬೀತಾದರೆ ಜೈಲು ಶಿಕ್ಷೆಯಾಗಲಿದೆ.

ಇದನ್ನೂ ಓದಿ – ಮಲೇಷಿಯಾ, ಸೇಲಂಗಿಂತಲು ಶಿವಮೊಗ್ಗದಲ್ಲಿ ಅತಿ ಎತ್ತರದ ಪ್ರತಿಮೆ, ಹೇಗಿರುತ್ತೆ? ಇಲ್ಲಿದೆ 7 ಪ್ರಮುಖ ವಿಶೇಷತೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 10, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment