SHIVAMOGGA LIVE NEWS | 20 SEPTEMBER 2023
SHIMOGA : ಬಸ್ಸಿಗೆ ಕಾಯುತ್ತ ನಿಲ್ದಾಣದಲ್ಲಿ ಮಲಗಿದ್ದ ವ್ಯಕ್ತಿಯ ಜೇಬಿನಲ್ಲಿದ್ದ ಮೊಬೈಲ್ (Mobile) ಮತ್ತು ನಗದು ಕಳ್ಳತನ ಮಾಡಲಾಗಿದೆ. ಶಿವಮೊಗ್ಗದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ.
ನ್ಯಾಮತಿಯ ಭರತ್ ಎಂಬುವವರು ಮಂಗಳೂರಿಗೆ ತೆರಳಲು ತಮ್ಮೂರಿನಿಂದ ಶಿವಮೊಗ್ಗಕ್ಕೆ ಬಂದಿದ್ದರು. ರಾತ್ರಿ 12 ಗಂಟೆಗೆ ಬಸ್ ಬರಲಿದೆ ಎಂದು ನಿಲ್ದಾಣದಲ್ಲಿಯೇ ಮಲಗಿದ್ದರು. ರಾತ್ರಿ 11.30ಕ್ಕೆ ಎಚ್ಚರವಾದಾಗ ಜೇಬಿನಲ್ಲಿದ್ದ 11 ಸಾವಿರ ರೂ. ಮೌಲ್ಯದ ವೀವೋ ಮೊಬೈಲ್ (Mobile) ಮತ್ತು 900 ರೂ. ನಗದು ಕಳ್ಳತನವಾಗಿತ್ತು. ಘಟನೆ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಬಸ್ ಹತ್ತುವಾಗ ಕೀ ಕೆಳಗೆ ಬಿತ್ತು, ಎತ್ತಿಕೊಂಡ ನಂತರ ಹಿರಿಯ ನಾಗರಿಕನಿಗೆ ಕಾದಿತ್ತು ಶಾಕ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200