SHIVAMOGGA LIVE NEWS | 3 JUNE 2024
SAGARA : ನೈಋತ್ಯ ಪದವೀಧರರ ಕ್ಷೇತ್ರದ ಚುನಾವಣೆಗೆ ಮತ ಚಲಾಯಿಸಲು ತೆರಳಿದ್ದ ಸಂದರ್ಭ ಮತಗಟ್ಟೆಯಲ್ಲಿ ಉದ್ಯಮಿಯೊಬ್ಬರ ಮೊಬೈಲ್ (Mobile Theft) ಕಳ್ಳತನವಾಗಿದೆ. ಸಾಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮತಗಟ್ಟೆಯಲ್ಲಿ ಉದ್ಯಮಿ ವಿನಯ್ ಎಂಬುವವರು ಮತ ಚಲಾಯಿಸಲು ತೆರಳಿದ್ದರು. ಮತ ಚಲಾಯಿಸುವ ಕೊಠಡಿಯೊಳಗೆ ಮೊಬೈಲ್ ಕೊಂಡೊಯ್ಯುವಂತಿಲ್ಲ ಎಂದು ಸಿಬ್ಬಂದಿ ತಿಳಿಸಿದ್ದರು.
ಸಿಬ್ಬಂದಿ ಸೂಚಿಸಿದ ಜಾಗದಲ್ಲಿ ಉದ್ಯಮಿ ವಿನಯ್ ಮೊಬೈಲ್ ಇಟ್ಟು ಹೋಗಿ ಮತ ಚಲಾಯಿಸಿದ್ದರು. ಕೊಠಡಿಯಿಂದ ಹೊರ ಬಂದಾಗ ವಿನಯ್ ಅವರ ಮೊಬೈಲ್ ನಾಪತ್ತೆಯಾಗಿತ್ತು. ಸಿಬ್ಬಂದಿಯನ್ನು ವಿಚಾರಿಸಿದಾಗ ತಮಗೆ ಗೊತ್ತಿಲ್ಲ ಎಂದು ತಿಳಿಸಿದ್ದಾರೆ. ಸಿಸಿಟಿವಿ ಕ್ಯಾಮರಾ ಇದ್ದರೂ ಕಾರ್ಯಾಚರಿಸುತ್ತಿಲ್ಲ ಎಂಬ ಸಬೂಬು ಹೇಳಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ವಿನಯ್ ಅವರು ಸಾಗರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ – ಮಟನ್ ಬದಲು ಮೂಳೆಯೇ ಹೆಚ್ಚಾಗಿದೆ ಅಂದಿದ್ದಕ್ಕೆ ಗ್ರಾಹಕನ ಮೇಲೆ ಅಪ್ರಾಪ್ತನಿಂದ ಮಾರಣಾಂತಿಕ ಅಟ್ಯಾಕ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200