ಶಿವಮೊಗ್ಗದ ಲೈವ್.ಕಾಂ | BHADRAVATHI NEWS | 31 ಡಿಸೆಂಬರ್ 2021
ಮಹಾರಾಷ್ಟ್ರ ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ ಮೊಬೈಲ್ ಫೋನ್’ಗಳನ್ನು ಭದ್ರಾವತಿಯಲ್ಲಿ ಹಂಚಿಕೊಳ್ಳುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಒಬ್ಬನನ್ನು ಬಂಧಿಸಲಾಗಿದ್ದು, ಮತ್ತಿಬ್ಬರು ಪರಾರಿಯಾಗಿದ್ದಾರೆ.
ಭದ್ರಾವತಿ ಆನ್ವರ್ ಕಾಲೋನಿಯ ಸೈಯದ್ ಅಲ್ವಿ (25) ಬಂಧಿತ. ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯ ಸಂತೆ ಮೈದಾನದಲ್ಲಿ ಕದ್ದ ಮೊಬೈಲ್’ಗಳನ್ನು ಮೂವರು ಹಂಚಿಕೊಳ್ಳುತ್ತಿದ್ದ ಸಂದರ್ಭ ಪೊಲೀಸರು ದಾಳಿ ನಡೆಸಿದ್ದಾರೆ.
ರಾಶಿ ರಾಶಿ ಮೊಬೈಲ್’ಗಳು
ಪ್ರೊಬೆಷನರಿ ಡಿವೈಎಸ್’ಪಿ ಗಜಾನನ ಸತಾರ್ ಅವರು ಗಸ್ತು ತಿರುಗುತ್ತಿದ್ದ ಸಂದರ್ಭ, ಸಂತೆ ಮೈದಾನದಲ್ಲಿ ದಾಳಿ ನಡೆಸಿದ್ದಾರೆ.
ಬಂಧಿತ ಸೈಯದ್ ಅಲ್ವಿಯಿಂದ ವಿವಿಧ ಕಂಪನಿಯ 55 ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ. ಇವುಗಳ ಮೌಲ್ಯ 6,68,400 ರೂ. ಎಂದು ಅಂದಾಜು ಮಾಡಲಾಗಿದೆ. ಮಹಾರಾಷ್ಟ್ರ ರಾಜ್ಯದ ವಿವಿಧೆಡೆ ಮೊಬೈಲ್ ಫೋನ್’ಗಳನ್ನು ಕಳವು ಮಾಡಿ ತರಲಾಗಿದೆ.
ಹೊಸಮನೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮತ್ತಿಬ್ಬರಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.
ಇದನ್ನೂ ಓದಿ | ಭದ್ರಾವತಿಯಲ್ಲಿ ಬೈಕ್ ಸವಾರರ ಬ್ಯಾಗ್’ನಲ್ಲಿ ಸಿಕ್ತು ರಾಶಿ ರಾಶಿ ಮೊಬೈಲ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200