ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಸೆಪ್ಟೆಂಬರ್ 2021
ರಸ್ತೆ ಬದಿ ಮೊಬೈಲ್ ಫೋನ್’ನಲ್ಲಿ ಮಾತನಾಡುತ್ತಿದ್ದ ವೇಳೆ ಬೈಕ್’ನಲ್ಲಿ ಬಂದ ಇಬ್ಬರು ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಈ ಸಂಬಂಧ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗದ ಗೋಪಾಳದ ದ್ರೌಪದಮ್ಮ ಸರ್ಕಲ್ ಬಳಿಕ ಘಟನೆ ಸಂಭವಿಸಿದೆ. ಪ್ರಭಾಕರ್ ಎಂಬುವವರು ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಮೊಬೈಲ್ ರಿಂಗಾಗಿದೆ. ವಾಹನವನ್ನು ರಸ್ತೆ ಬದಿಗೆ ನಿಲ್ಲಿಸಿ ಫೋನ್’ನಲ್ಲಿ ಮಾತನಾಡುತ್ತಿದ್ದರು.
ಹಿಂದಿನಿಂದ ಬೈಕ್’ನಲ್ಲಿ ಬಂದ ಇಬ್ಬರು ಪ್ರಭಾಕರ್ ಅವರ ಮೊಬೈಲ್ ಕಿತ್ತುಕೊಂಡು ಆಲ್ಕೊಳಕ್ಕೆ ಹೋಗುವ ಡಬಲ್ ರಸ್ತೆಯಲ್ಲಿ ತೆರಳಿದ್ದಾರೆ. ಈ ಸಂಬಂಧ ಪ್ರಭಾಕರ್ ಅವರು ತುಂಗಾ ನಗರ ಠಾಣೆಗೆ ದೂರು ನೀಡಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200