ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 22 FEBRUARY 2021
ಕದ್ದ ಮೊಬೈಲ್ಗಳನ್ನು ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದ ಬಳಿ ಮಾರಾಟ ಮಾಡುತ್ತಿದ್ದ ಯುವಕನೊಬ್ಬ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಬಂಧಿತನಿಂದ ಆರು ಮೊಬೈಲ್ಗಳನ್ನು ವಶಕ್ಕೆ ಪಡೆಯಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಶಿವಮೊಗ್ಗದ ಹೊಸಮನೆ ಬಡಾವಣೆಯ ವಿಶಾಲ್ (18) ಬಂಧಿತ. ಭದ್ರಾವತಿ, ಶಿವಮೊಗ್ಗದ ವಿವಿಧೆಡೆ ಮೊಬೈಲ್ ಕಳ್ಳತನ ಮಾಡಿದ್ದು, ಅವುಗಳನ್ನು ಮಾರಲು ಯತ್ನಿಸುತ್ತಿದ್ದ. ಈ ವೇಳೆ ಪೊಲೀಸರು ದಾಳಿ ನಡೆಸಿ, ವಿಶಾಲ್ನನ್ನು ಬಂಧಿಸಿದ್ದಾರೆ.
ಸಿಕ್ಕಿಬಿದ್ದಿದ್ದು ಹೇಗೆ?
ಖಾಸಗಿ ಬಸ್ ನಿಲ್ದಾಣದ ಹಿಂಭಾಗದ ಇಂದಿರಾ ಕ್ಯಾಂಟೀನ್ ಬಳಿ ಮೊಬೈಲ್ಗಳ ಮಾರಾಟಕ್ಕೆ ಪ್ರಯತ್ನಿಸುತ್ತಿದ್ದ. ಸ್ಥಳೀಯರೊಬ್ಬರು ಈ ಬಗ್ಗೆ ಮಾಹಿತಿ ನೀಡಿದ್ದು, ಕೂಡಲೆ ಸ್ಥಳಕ್ಕೆ ಧಾವಿಸಿದ ಪೊಲೀಸರು ವಿಶಾಲ್ನನ್ನು ಹಿಡಿದಿದ್ದಾರೆ. ಆತನ ಬಳಿ ಇದ್ದ ಮೊಬೈಲ್ಗಳನ್ನು ವಶಕ್ಕೆ ಪಡೆದು ದಾಖಲೆಗಳನ್ನು ಕೇಳಿದಾಗ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ.
ಇದನ್ನೂ ಓದಿ | ಕೌನ್ ಬನೇಗಾ ಕರೋಡ್ಪತಿ ಹೆಸರಲ್ಲಿ ತೀರ್ಥಹಳ್ಳಿಯ ವ್ಯಕ್ತಿಯೊಬ್ಬರಿಗೆ 1.43 ಲಕ್ಷ ರೂ. ವಂಚನೆ, ವಂಚಿಸಿದ್ದು ಹೇಗೆ?
ಹಣದ ಅವಶ್ಯಕತೆ ಇದ್ದುದ್ದರಿಂದ ಮೊಬೈಲ್ಗಳನ್ನು ಮಾರಾಟ ಮಾಡುತ್ತಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಎರಡು ಸ್ಯಾಮ್ ಸಂಗ್ ಮೊಬೈಲ್ಗಳು, ರೆಡ್ ಮಿ ಕಂಪನಿಯ ಎರಡು, ಟೆಕ್ನೊ, ಜಿಓನಿ ಕಂಪನಿಯ ಮೊಬೈಲ್ಗಳನ್ನು ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ | ಬೈಕ್ನಲ್ಲಿ ಲಾಂಗ್ ತಂದು, ಪದೇ ಪದೇ ಹೊರ ತೆಗೆದು ಜನರಲ್ಲಿ ಆತಂಕ ಮೂಡಿಸುತ್ತಿದ್ದವನು ಜೈಲಿಗೆ, ಯಾರವನು?
ದೊಡ್ಡಪೇಟೆ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಮೊಬೈಲ್ ಕಳ್ಳನನ್ನು ಬಂಧಿಸಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]