ಶಿವಮೊಗ್ಗ: ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನಿಂದ ಕಂತೆ ಕಂತೆ ಹಣ (Money), ಲಕ್ಷಾಂತರ ಮೌಲ್ಯದ ಆಭರಣಗಳನ್ನು ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗದ ಗೋಪಾಲಗೌಡ ಬಡಾವಣೆಯ ಸಿ ಬ್ಲಾಕ್ನ ಮನೆಯೊಂದರಲ್ಲಿ ಸೆ.17ರಂದು ಹಗಲು ಹೊತ್ತಿನಲ್ಲೆ ಕಳ್ಳತನವಾಗಿತ್ತು. ತನಿಖೆ ನಡೆಸಿದ ಪೊಲೀಸರು ಗೋಪಾಳ ನಿವಾಸಿ ಆಟೋ ಚಾಲಕ ಅಶ್ರಫ್ ವುಲ್ಲಾ (35) ಎಂಬಾತನನ್ನು ಬಂಧಿಸಿದ್ದಾರೆ. ಈತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಬಂಧಿತನಿಂದ ₹22.74 ಲಕ್ಷ ನಗದು, ₹11.70 ಲಕ್ಷ ಮೌಲ್ಯದ 130 ಗ್ರಾಂ ಚಿನ್ನದ ಆಭರಣ, ₹65 ಸಾವಿರ ಮೌಲ್ಯದ 550 ಗ್ರಾಂ ಬೆಳ್ಳಿ ಅಭರಣ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇನ್ಸ್ಪೆಕ್ಟರ್ ಕೆ.ಟಿ.ಗುರುರಾಜ್, ಸಿಬ್ಬಂದಿ ಕಿರಣ್ ಮೋರೆ, ಅರುಣ್ ಕುಮಾರ, ಮೋಹನ್ ಕುಮಾರ್, ನಾಗಪ್ಪ ಅಡಿವೆಪ್ಪನವರ್, ಹರೀಶ್ ನಾಯ್ಕ, ರಂಗನಾಥ್, ಹರೀಶ್ ಎಂ.ಜಿ, ಅನುಷಾ ಮತ್ತು ಚೈತ್ರಾ, ಜಿಲ್ಲಾ ಪೊಲೀಸ್ ಕಛೇರಿಯ ತಾಂತ್ರಿಕ ವಿಭಾಗದ ಸಿಬ್ಬಂದಿ ಇಂದ್ರೇಶ, ಗುರು ಮತ್ತು ವಿಜಯ, ಚಾಲಕ ಪುನೀತ್ ಆರೋಪಿಯನ್ನು ಬಂಧಿಸಿದ್ದಾರೆ.


ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಿನಿಮಾ ದಸರಾಗೆ ವೈಭವದ ಚಾಲನೆ, ನಟಿ ಕಾರುಣ್ಯ ಭರ್ಜರಿ ಡಾನ್ಸ್, ಏನಂದ್ರು ನಟ ಶರಣ್?
Money and jewels theft
