SAGARA NEWS, 19 OCTOBER 2024 : MSIL ಮದ್ಯದ ಮಳಿಗೆ ಬಾಗಿಲು ಮುರಿದು ಹಣ ಮತ್ತು ಮದ್ಯ ಕಳವು ಮಾಡಲಾಗಿದೆ. ಸಾಗರ ತಾಲೂಕು ಗೌತಮಪುರ ಗ್ರಾಮದ ಮದ್ಯದ ಅಂಗಡಿಯಲ್ಲಿ ಘಟನೆ ಸಂಭವಿಸಿದೆ.
ಬೆಳಗ್ಗೆ 11 ಗಂಟೆಗೆ ಮದ್ಯದ ಅಂಗಡಿ ಬಾಗಿಲು ತೆಗೆಯಲು ಸಿಬ್ಬಂದಿ ಬಂದಾಗ ರೋಲಿಂಗ್ ಷಟರ್ ಮುರಿದಿರುವುದು ಗೊತ್ತಾಗಿದೆ. ಒಳಗೆ ಪರಿಶೀಲಿಸಿದಾಗ ಕ್ಯಾಶ್ ಡ್ರಾದಲ್ಲಿದ್ದ 12,350 ರೂ. ಹಣ ಕಳುವಾಗಿತ್ತು. ಇನ್ನು, ಮದ್ಯದ ರಾಕ್ನಲ್ಲಿ ಪರಿಶೀಲಿಸಿದಾಗ 8960 ರೂ. ಮೌಲ್ಯದ ವಿವಿಧ ಬ್ರಾಂಡ್ನ ಮದ್ಯ ಕಳುವಾಗಿತ್ತು.
ಇದನ್ನೂ ಓದಿ » ಜಾನುವಾರು ಮೈ ತೊಳೆಯಲು ಹೋದ ಯುವಕ ನೀರಿನಲ್ಲಿ ಮುಳುಗಿ ಕೊನೆಯುಸಿರು
ಘಟನೆ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200