SHIMOGA NEWS, 16 OCTOBER 2024 : ಅಂಗಡಿಯೊಂದರ (Shop) ಬೀಗ ಮುರಿದು ಒಳ ನಗ್ಗಿದ ಕಳ್ಳರು ನೋಟಿನ ಬಂಡಲ್ಗಳು ಮತ್ತು ಬೆಳ್ಳಿ ನಾಣ್ಯಗಳನ್ನು ಕಳವು ಮಾಡಿದ್ದಾರೆ. ಶಿವಮೊಗ್ಗದ ಗಾಂಧಿ ಬಜಾರ್ನ ವೀರಭದ್ರಪ್ಪ ಅಂಡ್ ಸನ್ಸ್ ಪ್ರಾವಿಷನ್ ಸ್ಟೋರ್ನಲ್ಲಿ ಕಳ್ಳತನವಾಗಿದೆ.
ಮಾಲೀಕರು ಬೆಳಗ್ಗೆ ಅಂಗಡಿ ಬಾಗಿಲು ತೆರೆದಾಗ ಕ್ಯಾಶ್ ಡ್ರಾಗಳು ಓಪನ್ ಆಗಿದ್ದವು. ಪರಿಶೀಲಿಸಿದಾಗ ಕಳ್ಳತನ ಆಗಿರುವುದು ಬೆಳಕಿಗೆ ಬಂದಿದೆ. ಪಕ್ಕದ ಕಟ್ಟಡದಿಂದ ಅಂಗಡಿಯ ಮೂರನೇ ಮಹಡಿಗೆ ನುಗ್ಗಿರುವ ಕಳ್ಳರು ಗ್ರಿಲ್ ಗೇಟ್ನ ಬೀಗ ಒಡೆದು ಅಂಗಡಿಯೊಳಗೆ ನುಗ್ಗಿದ್ದಾರೆ. ಸಿಸಿಟಿವಿಯ ವಯರ್ ತುಂಡು ಮಾಡಿ, ಕ್ಯಾಮರಾಗಳನ್ನು ಬೇರೆಡೆಗೆ ತಿರುಗಿಸಿ ನೆಲಮಹಡಿಯಲ್ಲಿದ್ದ ಕ್ಯಾಶ್ ಕೌಂಟರ್ನಲ್ಲಿ ಹಣ ಕಳವು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
![]() |
ಇದನ್ನೂ ಓದಿ » ಶಿವಮೊಗ್ಗ – ಚೆನ್ನೈ ವಿಮಾನಯಾನ ಶುರು, ಹೇಗಿತ್ತು ಮೊದಲ ದಿನ?
ಕ್ಯಾಶ್ ಡ್ರಾದಲ್ಲಿದ್ದ 10 ರೂ. ಮತ್ತು 50 ರೂ.ನ ನೋಟ್ ಬಂಡಲ್ಗಳನ್ನು ಕಳುವಾಗಿದೆ. ಇವುಗಳ ಒಟ್ಟು ಮೊತ್ತ 1.10 ಲಕ್ಷ ರೂ. ಇನ್ನು, 10 ಸಾವಿರ ರೂ. ಮೌಲ್ಯದ 200 ಗ್ರಾಂ ತೂಕದ ಬೆಳ್ಳಿ ನಾಣ್ಯಗಳನ್ನು ಕಳ್ಳತನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200