SHIMOGA NEWS, 15 NOVEMBER 2024 : ದ್ವಿಚಕ್ರ ವಾಹನದ ಡಿಕ್ಕಿಯಲ್ಲಿ ಇಟ್ಟಿದ್ದ 1.20 ಲಕ್ಷ ರೂ. ನಗದು ಕಳ್ಳತನವಾಗಿದೆ. ಶಿವಮೊಗ್ಗದ ಬಿ.ಹೆಚ್.ರಸ್ತೆಯಲ್ಲಿರುವ ಬಜಾಜ್ ಫೈನಾನ್ಸ್ (finance) ಸಂಸ್ಥೆಯಲ್ಲಿ ಮುಂಭಾಗ ಘಟನೆ ನಡೆದಿದೆ.
ಬಜಾಜ್ ಫೈನಾನ್ಸ್ ಸಂಸ್ಥೆಯ ಉದ್ಯೋಗಿ ಪದ್ಮನಾಭ ಎಂಬುವವರು ತಮ್ಮ ದ್ವಿಚಕ್ರ ವಾಹನದ ಡಿಕ್ಕಿಯಲ್ಲಿ ಇಟ್ಟಿದ್ದ ಹಣ ಕಳುವಾಗಿದೆ ಎಂದು ಆರೋಪಿಸಲಾಗಿದೆ. ಬ್ಯಾಂಕ್ಗೆ ಕಟ್ಟಲು ಪದ್ಮನಾಭ ಅವರ ಸಹೋದರಿ ಹಣ ನೀಡಿದ್ದರು. ಅದನ್ನು ಬೈಕ್ ಡಿಕ್ಕಿಯಲ್ಲಿ ಇರಿಸಿಕೊಂಡು ಪದ್ಮನಾಭ ಅವರು ಕಚೇರಿಗೆ ತೆರಳಿದ್ದರು.
ಇದನ್ನೂ ಓದಿ » ಸರ್ಕಾರಿ ನೌಕರರ ಸಂಘ, ನಾಳೆ ಮತದಾನ, ಅಭ್ಯರ್ಥಿಗಳಿಗೆ ಢವಢವ
ಸ್ವಲ್ಪ ಸಮಯದ ಬಳಿಕ ಕಚೇರಿಯಿಂದ ಬೈಕ್ ಬಳಿ ಬಂದು ಡಿಕ್ಕಿ ತೆರೆದಾಗ ಹಣ ಇರಲಿಲ್ಲ. ಘಟನೆ ಸಂಬಂಧ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200