ಶಿವಮೊಗ್ಗ: ಕೆಎಸ್ಆರ್ಟಿಸಿ ಬಸ್ ಹತ್ತುವಾಗ ವ್ಯಕ್ತಿಯೊಬ್ಬರ ಜೇಬಿನಲ್ಲಿದ್ದ 50 ಸಾವಿರ ರೂ. ಹಣ (Money) ಕಳ್ಳತನ ಮಾಡಲಾಗಿದೆ. ಗೋಪಾಳದ ಪರಮೇಶ್ವರಪ್ಪ ಎಂಬುವವರ ಜೇಬಿನಲ್ಲಿದ್ದ ಹಣ ಕಳುವಾಗಿದೆ.
ಪರಮೇಶ್ವರಪ್ಪ ಕೃಷಿ ಪಂಪ್ ಸೆಟ್ ಖರೀದಿಗೆಂದು ಬ್ಯಾಂಕ್ನಿಂದ 50 ಸಾವಿರ ರೂ. ಹಣ ಬಿಡಿಸಿಕೊಂಡು ಬಂದಿದ್ದರು. ಹೊನ್ನಾಳಿಗೆ ತೆರಳಬೇಕಿದ್ದರಿಂದ ಶಿವಮೊಗ್ಗದ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಆಗಮಿಸಿದ್ದರು. ಬಸ್ ಹತ್ತುವಾಗ ರಶ್ ಇತ್ತು. ಆದರೂ ಪರಮೇಶ್ವರಪ್ಪ ಅವರು ಬಸ್ ಏರಿ, ಸೀಟ್ ಹಿಡಿದಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಬಸ್ಸು ನಿಲ್ದಾಣದಿಂದ ಹೊರಟು ಸ್ವಲ್ಪ ದೂರ ಬಂದಿದ್ದು, ಪರಮೇಶ್ವರಪ್ಪ ಟಿಕೆಟ್ ಮಾಡಿಸಲು ಹಣ ತೆಗೆಯಲು ಜೇಬಿಗೆ ಕೈ ಹಾಕಿದಾಗ ಹಣ ಇರಲಿಲ್ಲ. ಕೂಡಲೆ ಬಸ್ ಇಳಿದು ನಿಲ್ದಾಣಕ್ಕೆ ಹಿಂತಿರುಗಿ ಹುಡುಕಿದರೂ ಹಣ ಸಿಕ್ಕಿರಲಿಲ್ಲ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಮಳೆ, ತುಸು ತಂಪಾದ ವಾತಾವರಣ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200