ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕೆಎಸ್ಆರ್ಟಿಸಿ ಬಸ್ ಹತ್ತುವಾಗ ವ್ಯಕ್ತಿಯೊಬ್ಬರ ಜೇಬಿನಲ್ಲಿದ್ದ 50 ಸಾವಿರ ರೂ. ಹಣ (Money) ಕಳ್ಳತನ ಮಾಡಲಾಗಿದೆ. ಗೋಪಾಳದ ಪರಮೇಶ್ವರಪ್ಪ ಎಂಬುವವರ ಜೇಬಿನಲ್ಲಿದ್ದ ಹಣ ಕಳುವಾಗಿದೆ.
ಪರಮೇಶ್ವರಪ್ಪ ಕೃಷಿ ಪಂಪ್ ಸೆಟ್ ಖರೀದಿಗೆಂದು ಬ್ಯಾಂಕ್ನಿಂದ 50 ಸಾವಿರ ರೂ. ಹಣ ಬಿಡಿಸಿಕೊಂಡು ಬಂದಿದ್ದರು. ಹೊನ್ನಾಳಿಗೆ ತೆರಳಬೇಕಿದ್ದರಿಂದ ಶಿವಮೊಗ್ಗದ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಆಗಮಿಸಿದ್ದರು. ಬಸ್ ಹತ್ತುವಾಗ ರಶ್ ಇತ್ತು. ಆದರೂ ಪರಮೇಶ್ವರಪ್ಪ ಅವರು ಬಸ್ ಏರಿ, ಸೀಟ್ ಹಿಡಿದಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಬಸ್ಸು ನಿಲ್ದಾಣದಿಂದ ಹೊರಟು ಸ್ವಲ್ಪ ದೂರ ಬಂದಿದ್ದು, ಪರಮೇಶ್ವರಪ್ಪ ಟಿಕೆಟ್ ಮಾಡಿಸಲು ಹಣ ತೆಗೆಯಲು ಜೇಬಿಗೆ ಕೈ ಹಾಕಿದಾಗ ಹಣ ಇರಲಿಲ್ಲ. ಕೂಡಲೆ ಬಸ್ ಇಳಿದು ನಿಲ್ದಾಣಕ್ಕೆ ಹಿಂತಿರುಗಿ ಹುಡುಕಿದರೂ ಹಣ ಸಿಕ್ಕಿರಲಿಲ್ಲ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮಳೆ, ತುಸು ತಂಪಾದ ವಾತಾವರಣ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?


LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





