SHIVAMOGGA LIVE NEWS | 14 JULY 2024
SHIMOGA : ಟ್ರಾನ್ಸ್ಪೋರ್ಟ್ ಕಚೇರಿ ಮುಂಭಾಗ ನಿಲ್ಲಿಸಿದ್ದ ವಾಹನದ ಡ್ಯಾಶ್ ಬೋರ್ಡ್ನಲ್ಲಿ ಹಣ (Money) ಕಳ್ಳತನ ಮಾಡಿದ್ದ ಆರೋಪಿಯನ್ನು ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೊಸಮನೆ ಬಡಾವಣೆಯ ನರಸಿಂಹಮೂರ್ತಿ ಬಂಧಿತ.
ಕಳ್ಳತನ ಆಗಿದ್ದು ಹೇಗೆ?
ಕೋಣಂದೂರಿನ ತಿಮ್ಮಪ್ಪ ಎಂಬುವವರು ಗೂಡ್ಸ್ ವಾಹನದಲ್ಲಿ ಶಿವಮೊಗ್ಗದಿಂದ ಕೋಣಂದೂರಿಗೆ ಪಾರ್ಸಲ್ ಕೊಂಡೊಯ್ಯುವ ವ್ಯವಹಾರ ನಡೆಸುತ್ತಿದ್ದಾರೆ. ಮೇ 9ರಂದು ಸವಾರ್ಲೈನ್ ರಸ್ತೆಯ ವಿಆರ್ಎಲ್ ಸಂಸ್ಥೆಯಲ್ಲಿ ಪಾರ್ಸಲ್ ಕೊಂಡೊಯ್ಯಲು ಬಂದಿದ್ದರು. ಈ ಸಂದರ್ಭ ನರಸಿಂಹಮೂರ್ತಿ ಎಂಬಾತ ಸಿಕ್ಕಿದ್ದು, ಆತನೊಂದಿಗೆ ಮಾತನಾಡಿದ್ದಾರೆ. ತಿಮ್ಮಪ್ಪ ವಿಆರ್ಎಲ್ ಕಚೇರಿ ಒಳ ಹೋದಾಗ ನರಸಿಂಹಮೂರ್ತಿ ವಾಹನದ ಡ್ಯಾಶ್ ಬೋರ್ಡ್ನಲ್ಲಿದ್ದ 1.50 ಲಕ್ಷ ರೂ. ಹಣ ಕಳ್ಳತನ ಮಾಡಿದ್ದ. ಸಿಸಿಟಿವಿ ಪರಿಶೀಲಿಸಿದಾಗ ನರಸಿಂಹಮೂರ್ತಿ ಕಳವು ಮಾಡಿರುವುದು ಗೊತ್ತಾಗಿತ್ತು.
ಆರೋಪಿ ಅರೆಸ್ಟ್, ಹಣ ಸೀಜ್
ದೊಡ್ಡಪೇಟೆ ಠಾಣೆ ಇನ್ಸ್ಪೆಕ್ಟರ್ ರವಿ ಪಾಟೀಲ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಪಿಎಸ್ಐ ನಾಗರಾಜ್, ಸಿಬ್ಬಂದಿ ಪಾಲಾಕ್ಷ ನಾಯ್ಕ, ನಾಗರಾಜ್, ಪಾಲಾಕ್ಷ ನಾಯ್ಕ, ಲಚ್ಚಾನಾಯ್ಕ್, ಚಂದ್ರನಾಯ್ಕ, ಗುರುನಾಯ್ಕ, ನಿತಿನ್, ಪುನೀತ್ ರಾವ್ ಮತ್ತು ಪ್ರಕಾಶ್ ಅವರನ್ನು ಒಳಗೊಂಡ ತಂಡ ಆರೋಪಿ ನರಸಿಂಹಮೂರ್ತಿಯನ್ನು ಬಂಧಿಸಿದೆ. ಆತನಿಂದ 1.30 ಲಕ್ಷ ರೂ. ಹಣ ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ ⇓
ಶಿವಮೊಗ್ಗ KSRTC ನಿಲ್ದಾಣದಲ್ಲಿ ಕಳ್ಳತನ ಕೇಸ್, ಭದ್ರಾವತಿಯ 5 ಮಹಿಳೆಯರು ಅರೆಸ್ಟ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200