SHIVAMOGGA LIVE NEWS | 3 FEBRUARY 2024
SHIKARIPURA : ದೂರು ನೀಡಿದ ನಾಲ್ಕೇ ಗಂಟೆಯಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿ ಆತನಿಂದ ಎರಡು ಲಕ್ಷ ರೂ. ನಗದು ವಶಪಡಿಸಿಕೊಂಡಿದ್ದಾರೆ. ಬಾಳೆಕೊಪ್ಪ ಗ್ರಾಮದ ಹನುಮಂತ ನಾಯ್ಕ ಎಂಬುವವರ ಮನೆಯಲ್ಲಿ ಕಳ್ಳತನವಾಗಿತ್ತು.
ಹನುಮಂತ ನಾಯ್ಕ ಅವರ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಘಟನೆ ಸಂಭವಿಸಿತ್ತು. ಮನೆ ಬಾಗಿಲಿನ ಬೀಗ ಹಾಕಿ ಅದನ್ನು ಬಾಗಿಲಿನ ಬಳಿ ಇರಿಸಿದ್ದರು. ಅದೇ ಬೀಗ ಬಳಸಿ ಮನೆಯೊಳಗೆ ಹೋಗಿದ್ದ ಯುವಕ 2,05,000 ರೂ. ನಗದು ಕಳವು ಮಾಡಿ ಯುವಕ ತಲೆಮರೆಸಿಕೊಂಡಿದ್ದ. ಸಿಸಿಟಿವಿ ಪರಿಶೀಲಿಸಿದಾಗ ತಮ್ಮೂರಿಗೆ ಆಗಾಗ ಬರುತ್ತಿದ್ದ ಚನ್ನಗಿರಿ ಮೂಲದ ಕಾಲೇಜು ವಿದ್ಯಾರ್ಥಿ ಎಂದು ಗೊತ್ತಾಗಿದೆ.
ಈ ಬಗ್ಗೆ ದೂರು ಬಂದ ಹಿನ್ನೆಲೆ ಶಿಕಾರಿಪುರ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ದೂರು ದಾಖಲಾದ ಕೇವಲ 4 ಗಂಟೆಯ ಒಳಗಾಗಿ ಆರೋಪಿಯ ಬಂಧನವಾಗಿದೆ. ಐಫೋನ್ ಖರೀದಿಗಾಗಿ ಕಳ್ಳತನ ಮಾಡಿದ್ದಾಗಿ ವಿಚಾರಣೆ ವೇಳೆ ಹೇಳಿದ್ದಾನೆ ಎಂದು ತಿಳಿದು ಬಂದಿದೆ. ಇನ್ಸ್ಪೆಕ್ಟರ್ ಆರ್.ಆರ್ ಪಾಟೀಲ್ ನೇತೃತ್ವದಲ್ಲಿ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ – 25 ವರ್ಷದ ಯುವಕನಿಗೆ 20 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ. ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200